ಅಯೋಡಿನ್ಯುಕ್ತ ಉಪ್ಪನ್ನೇ ಬಳಸಿರಿ, ಅಯೋಡಿನ್ ಕೊರತೆಯ ನ್ಯೂನ್ಯತೆ ತಡೆಗಟ್ಟಿರಿ
Use iodized salt to prevent iodine deficiency
‘ವಿಶ್ವ ಅಯೋಡಿನ್ ಕೊರತೆಯ ನ್ಯೂನ್ಯತೆಗಳ ನಿಯಂತ್ರಣ ದಿನ ಹಾಗೂ ಸಪ್ತಾಹ’ ಕಾರ್ಯಕ್ರಮದಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮರಿಯಂಬಿ ಹೇಳಿಕೆ
ಬಳ್ಳಾರಿ,ಅ.28: ಅಯೋಡಿನ್ ಮನುಷ್ಯನಿಗೆ ಅತ್ಯಗತ್ಯವಾಗಿ ಬೇಕಾಗುವ ಒಂದು ಸೂಕ್ಷ್ಮ ಪೋಷಕಾಂಶವಾಗಿದ್ದು, ಪ್ರತಿಯೊಬ್ಬರು ದಿನನಿತ್ಯ ಆಹಾರದಲ್ಲಿ ಅಯೋಡಿನ್ ಯುಕ್ತ ಉಪ್ಪು ಬಳಸುವ ಮೂಲಕ ಆಯೋಡಿನ್ ಕೊರತೆಯ ನ್ಯೂನ್ಯತೆ ತಡೆಗಟ್ಟಬಹುದು ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮರಿಯಂಬಿ.ವಿ.ಕೆ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ ಇವರ ಸಂಯುಕ್ತಾಶ್ರಯದಲ್ಲಿ ಅಯೋಡಿನ್ ಕೊರತೆಯ ನ್ಯೂನ್ಯತೆಗಳ ನಿಯಂತ್ರಣ ಕಾರ್ಯಕ್ರಮದಡಿ ನಗರದ ಸರ್ಕಾರಿ (ಮಾಜಿ ಪುರಸಭೆ) ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ಆಯೋಜಿಸಿದ್ದ ‘ವಿಶ್ವ ಅಯೋಡಿನ್ ಕೊರತೆಯ ನ್ಯೂನ್ಯತೆಗಳ ನಿಯಂತ್ರಣ ದಿನ ಹಾಗೂ ಸಪ್ತಾಹ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಆಯೋಡಿನ್ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಅತ್ಯವಶ್ಯಕವಾಗಿದೆ. ಥೈರಾಯಿಡ್ ಗ್ರಂಥಿಯು ನಮ್ಮ ದೇಹಕ್ಕೆ ಅವಶ್ಯಕವಿರುವ ಹಾರ್ಮೋನ್ಗಳನ್ನು ಉತ್ಪತ್ತಿ ಮಾಡಲು ಅಯೋಡಿನ್ ಅಂಶ ಪೂರಕವಾಗಿದೆ. ಹಾಗಾಗಿ ದಿನನಿತ್ಯ ಹಸಿರು ಸೊಪ್ಪು ಮತ್ತು ತರಕಾರಿ ಸೇವನೆಯ ಮೂಲಕ ತಾಜಾ ತರಕಾರಿಯೊಂದಿಗೆ ಅಯೋಡಿನ್ಯುಕ್ತ ಉಪ್ಪು ಬಳಕೆ ಮಾಡುಬೇಕು ಎಂದು ಅವರು ತಿಳಿಸಿದರು.
ಉಪ್ಪಿನ ಜಾಡಿಯನ್ನು ಭದ್ರವಾಗಿ ಮುಚ್ಚುವ ಮೂಲಕ ಅಯೋಡಿನ್ ಕೊರತೆಯಿಂದ ಉಂಟಾಗುವ ನ್ಯೂನ್ಯತೆಗಳನ್ನು ನಿಯಂತ್ರಿಸಬಹುದಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಮೈಕ್ರೋಬಯಾಲಾಜಿಸ್ಟ್ ಶರತ್ಬಾಬು.ಕೆ ಅವರು ಮಾತನಾಡಿ, ಅಯೋಡಿನ್ ಕೊರತೆಯಿಂದ ಹೆಚ್ಚಾಗಿ ಮಕ್ಕಳು, ವಯಸ್ಕರು, ಗರ್ಭಿಣಿ ಮಹಿಳೆಯರಲ್ಲಿ ನ್ಯೂನತೆಗಳು ಕಂಡುಬರುತ್ತವೆ. ಮುಖ್ಯವಾಗಿ ಮಕ್ಕಳಲ್ಲಿ ಬುದ್ದಿಮಾಂದ್ಯತೆ, ಕುಬ್ಜತನ, ದೇಹದ ಅಂಗಾಂಗಳ ಕುಂಠಿತ ಬೆಳವಣಿಗೆ, ವಯಸ್ಕರಲ್ಲಿ ನಿಶ್ಯಕ್ತಿ, ಕಾರ್ಯನಿರ್ವಹಣೆಯಲ್ಲಿ ವೈಫಲ್ಯತೆ, ಗಳಗಂಡ ರೊಗ, ಗರ್ಭೀಣಿಯರಲ್ಲಿ ಪದೇ ಪದೇ ಗರ್ಭಪಾತ, ಸಂತಾನೋತ್ಪತ್ತಿಯ ತೊಂದರೆ, ಅಂಗವಿಕಲತೆ, ಬುದ್ಧಿಮಾಂದ್ಯತೆ ಇರುವ ಮಕ್ಕಳು ಹುಟ್ಟುವ ಸಾಧ್ಯತೆ ಇರುತ್ತದೆ ಎಂದು ತಿಳಿಸಿದರು.
ದಿನನಿತ್ಯ ಸೇವಿಸುವ ಆಹಾರದಲ್ಲಿ ವಯಸ್ಸಿಗೆ ಅನುಗುಣವಾಗಿ ಅಯೋಡಿನ್ ಅಂಶ ಎಷ್ಟಿರಬೇಕು ಬಳಸಬೇಕು ಎನ್ನುವುದರ ಬಗ್ಗೆ ಅರಿವು ಹೊಂದಬೇಕು ಎಂದರು.
ಸರ್ಕಾರಿ (ಮಾಜಿ ಪುರಸಭೆ) ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸುಂಕಪ್ಪ ಅವರು ಮಾತನಾಡಿ, ಮನುಷ್ಯನ ಆರೋಗ್ಯ ಸ್ಥಿರವಾಗಿರುವಲ್ಲಿ ಅಯೋಡಿನ್ ಅಂಶ ತುಂಬಾ ಅವಶ್ಯಕವಾಗಿದೆ. ಹಾಗಾಗಿ ಆರೋಗ್ಯ ಇಲಾಖೆಯಿಂದ ತಿಳಿಸಲಾದ ಮುಂಜಾಗ್ರತಾ ಕ್ರಮಗಳನ್ವಯ ವಿದ್ಯಾರ್ಥಿಗಳು ಗಮನದಲ್ಲಿಟ್ಟುಕೊಂಡು ತಮ್ಮ ಕುಟುಂಬರಿಗೆ ಮತ್ತು ಅಕ್ಕಪಕ್ಕದ ಸಾರ್ವಜನಿಕರಿಗೆ ಅಯೋಡಿನ್ಯುಕ್ತ ಉಪ್ಪನ್ನು ಬಳಸಲು ತಿಳಿಸಬೇಕು ಮತ್ತು ಅವರಲ್ಲಿ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.
ಬಳಿಕ ಪ್ರಾಯೋಗಿಕವಾಗಿ ಉಪ್ಪಿನಲ್ಲಿ ಅಯೋಡಿನ್ ಅಂಶವನ್ನು ಪರೀಕ್ಷಿಸುವ ವಿಧಾನದ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಲಾಯಿತು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಧ್ಯಾಪಕರಾದ ನಾಗರಾಜಪ್ಪ, ಗಾದಿಲಿಂಗಪ್ಪ, ತಿಮ್ಮಪ್ಪ, ಅಕ್ಕಿ ಮಲ್ಲಿಕಾರ್ಜುನ, ಎನ್.ಸಿ.ಡಿ ಜಿಲ್ಲಾ ಕಾರ್ಯಕ್ರಮ ಸಂಯೋಜಕರಾದ ಡಾ.ಜಬೀನ್ತಾಜ್, ಜಿಲ್ಲಾ ಮೈಕ್ರೋಬಯಾಲಾಜಿಸ್ಟ್ ಶರತ್ ಬಾಬು, ಜಿಲ್ಲಾ ತಂಬಾಕು ಸಲಹೆಗಾರ ಪ್ರಶಾಂತ್ ಸೇರಿದಂತೆ ಜಿಲ್ಲಾ ಸರ್ವೇಕ್ಷಣಾ ಘಟಕದ ಸಿಬ್ಬಂದಿ, ಜಿಲ್ಲಾ ಕಾಲರ ನಿಯಂತ್ರಣ ತಂಡದ ಸಿಬ್ಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 