ವಸತಿ ಶಾಲೆಗಳನ್ನು ಕ್ವಾರಂಟೀನ್ ಗಳಾಗಿ ಉಪಯೋಗಿಸಿ : ಗೋವಿಂದ ಕಾರಜೋಳ
ಬೆಂಗಳೂರು.
ಮಾ 27,ಜಾಗತಿಕವಾಗಿ ತೀವ್ರ ಆತಂಕ ಸೃಷ್ಟಿಸಿರುವ ಕೊರೊನಾ ವೈರಸ್
ನಿಯಂತ್ರಣಕ್ಕಾಗಿ ವಸತಿ ಶಾಲೆಗಳನ್ನು ಕ್ವಾರಂಟೀನ್ ಗಳನ್ನಾಗಿ ಬಳಕೆ ಮಾಡಿಕೊಳ್ಳುವಂತೆ
ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ತಿಳಿಸಿದ್ದಾರೆ.ವಸತಿ ಶಾಲೆಗಳ
ವಿದ್ಯಾರ್ಥಿಗಳಿಗೆ ಈಗಾಗಲೇ ಬೇಸಿಗೆ ರಜೆ ಘೋಷಣೆ ಮಾಡಿದ್ದು, ಪ್ರಸ್ತುತ ಯಾವ
ವಿದ್ಯಾರ್ಥಿಗಳು ವಸತಿ ಶಾಲೆಗಳಲ್ಲಿ ಇಲ್ಲ. ರಾಜ್ಯದ ಎಲ್ಲಾ ಜಿಲ್ಲೆ,
ತಾಲೂಕುಗಳಲ್ಲಿರುವ ವಸತಿ ಶಾಲೆಗಳು ಹಾಗೂ ವಿದ್ಯಾರ್ಥಿ ನಿಲಯಗಳು ವಿಶಾಲವಾದ ಸ್ಥಳದಲ್ಲಿ
ಸುಸಜ್ಜಿತವಾಗಿದ್ದು, ಪ್ರತ್ಯೇಕ ಕೊಠಡಿಗಳು, ಅಡುಗೆ ಮನೆ, ಶೌಚಾಲಯ, ಸ್ನಾನಗೃಹ,
ವಾಚನಾಲಯ ಸೇರಿದಂತೆ ಸಮಸ್ತ ಮೂಲಭೂತ ಸೌಕರ್ಯಗಳನ್ನು ಹೊಂದಿವೆ ಎಂದು ಹೇಳಿದ್ದಾರೆ.
ಈ
ವಸತಿ ಶಾಲೆಗಳು ಹಾಗೂ ವಿದ್ಯಾರ್ಥಿ ನಿಲಯಗಳು ಜನ ಸಂದಣಿಯಿಂದ ದೂರ ಪ್ರದೇಶಗಳಲ್ಲಿದ್ದು,
ಇಲ್ಲಿ ಕೊರೋನಾ ಸೋಂಕಿತರನ್ನು ದಿಗ್ಭಂಧನದಲ್ಲಿಟ್ಟರೆ ಸೋಂಕು ನಾಗರಿಕ ಸಮುದಾಯಕ್ಕೆ
ವ್ಯಾಪಿಸುವ ಆತಂಕ ಇರುವುದಿಲ್ಲ ಎಂದು ಹೇಳಿದ್ದಾರೆ.ಅಗತ್ಯರುವ ಸಮೀಪದ
ಪ್ರದೇಶಗಳಲ್ಲಿ ಯಾವುದೇ ವೆಚ್ಚವಿಲ್ಲದೇ ಕ್ವಾರಂಟೀನ್ ಗಳನ್ನಾಗಿ ಪರಿವರ್ತಿಸಬಹುದಾಗಿದೆ.
ಜಿಲ್ಲಾಡಳಿತವು ಈ ವಸತಿ ಶಾಲೆಗಳನ್ನು ಮುಕ್ತವಾಗಿ ಬಳಕೆ ಮಾಡಬಹುದು ಗೋವಿಂದ ಕಾರಜೋಳ
ತಿಳಿಸಿದ್ದಾರೆ.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 