ಕಜಾವಿವಿಯ ಶೈಕ್ಷಣಿಕ ಸೌಲಭ್ಯವನ್ನು ಬಳಸಿಕೊಳ್ಳಿ ಕುಲಪತಿ ಕಿವಿಮಾತು
ಲೋಕದರ್ಶನ ವರದಿ
ಶಿಗ್ಗಾವಿ/ಗೊಟಗೋಡಿ: ವಿದ್ಯಾಥರ್ಿಗಳು ಸಮಯ ವ್ಯರ್ಥ ಮಾಡದೇ ತಮ್ಮ ಭವಿಷ್ಯ ರೂಪಿಸಿಕೊಳ್ಳುವತ್ತ ಹೆಚ್ಚು ಗಮನ ಕೊಡಬೇಕು. ವಿವಿ ನೀಡಿರುವ ಉಚಿತ ಲ್ಯಾಪಟಾಪ್ಗಳನ್ನು ತಮ್ಮ ವಿದ್ಯಾಭ್ಯಾಸದ ಬೆಳವಣಿಗೆಗೆ ಉಪಯೋಗಿಸಿಕೊಳ್ಳಬೇಕು ಎಂದು ಕನರ್ಾಟಕ ಜಾನಪದ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಡಿ.ಬಿ. ನಾಯಕ ಅವರು ವಿದ್ಯಾಥರ್ಿಗಳಿಗೆ ಕಿವಿಮಾತು ಹೇಳಿದರು.
ಇಲ್ಲಿನ ಕನರ್ಾಟಕ ಜಾನಪದ ವಿಶ್ವವಿದ್ಯಾಲಯದ ಮಲ್ಲಿಗೆ ದಂಡೆ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾಥರ್ಿಗಳಿಗೆ ಉಚಿತ ಲ್ಯಾಪ್ಟಾಪ್ ವಿತರಣಾ ಸಮಾರಂಭದ ಅಧ್ಯಕ್ಷತೆ ವಹಿಸಿಕೊಂಡು, ವಿದ್ಯಾಥರ್ಿಗಳಿಗೆ ಲ್ಯಾಪ್ಟಾಪ್ ವಿತರಿಸಿ ಅವರು ಮಾತನಾಡಿದರು. ವಿದ್ಯಾಥರ್ಿಗಳ ಶೈಕ್ಷಣಿಕ ಚಟುವಟಿಕೆಗಳಿಗೆ ಜಾನಪದ ವಿಶ್ವವಿದ್ಯಾಲಯ ಪ್ರೋತ್ಸಾಹ ನೀಡುತ್ತಿದೆ. ವಿಶ್ವವಿದ್ಯಾಲಯ ವಿದ್ಯಾಥರ್ಿಗಳ ಭವಿಷ್ಯಕ್ಕೆ ಅನುಕೂಲವಾಗುವಂತೆ ಸ್ಪಧರ್ಾತ್ಮಕ ಪರೀಕ್ಷೆಗಳ ತರಬೇತಿಗಳನ್ನು ಆಯೋಜಿಸಲಾಗುತ್ತದೆ ಎಂದು ಹೇಳಿದರು.
ಅನೇಕ ಉತ್ತಮವಾದ ವಿವಿಧ ಸೌಲಭ್ಯ ಒದಗಿಸುವ ಮೂಲಕ ವಿದ್ಯಾಥರ್ಿಗಳ ಹಿತಕಾಯುವ ಕೆಲಸವನ್ನು ವಿಶ್ವವಿದ್ಯಾಲಯ ಮಾಡುತ್ತಿದೆ. ಇದನ್ನು ಸದ್ಬಳಕೆ ಮಾಡಿಕೊಂಡು ಉತ್ತಮ ಸಾಧನೆ ಹೊಂದಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಪ್ರೊ. ಚಂದ್ರಶೇಖರ, ಕುಲಸಚಿವರು ಅವರು ಮಾತನಾಡಿ ಇಂದಿನ ದಿನಗಳ ವಿದ್ಯಾಥರ್ಿಗಳ ಕೈಯಲ್ಲಿ ಒಳ್ಳೆಯದು ಕೆಟ್ಟದ್ದು ಎರಡು ಇವೆ. ಇವತ್ತಿನ ವಿವಿಧ ಮಾಧ್ಯಮಗಳು ವಿದ್ಯಾಥರ್ಿಗಳ ಏಕಾಗ್ರತೆಯನ್ನು ಹಾಳು ಮಾಡುವಂತವುಗಳಾಗಿರುತ್ತವೆ. ಇದಕ್ಕೆಲ್ಲ ಮರುಳಾಗದೆ ಒಳ್ಳೆಯದನ್ನು ಮಾತ್ರ ಆಯ್ಕೆ ಮಾಡಿಕೊಂಡು ಉತ್ತಮವಾದ ಜೀವನ ರೂಪಿಸಿಕೊಳ್ಳಬೇಕು ಮತ್ತು ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು. ಉಚಿತವಾಗಿ ಲ್ಯಾಪಟಾಪ್ ದೊರೆತ ವಿದ್ಯಾಥರ್ಿಗಳ ಭವಿಷ್ಯಕ್ಕೆ ಒಳ್ಳೆಯದಾಗಲಿ ಎಂದು ಹಾರೈಸಿದರು.
ಕಾರ್ಯಕ್ರಮದಲ್ಲಿ ವಿದ್ಯಾಥರ್ಿಗಳಾದ ಮುತ್ತಪ್ಪ ಲಮಾಣಿ ಮತ್ತು ನಾಗರಾಜ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ಸಹಾಯಕ ಗ್ರಂಥಪಾಲಕರಾಧ ಡಾ. ಕೋಟೆಪ್ಪ ಬಾಣತೆಪ್ಪನವರ ಅವರು ಸ್ವಾಗತಿಸಿದರು. ಸಹಾಯಕ ಕುಲಸಚಿವರಾದ ಶಹಜಹಾನ ಮುದಕವಿ ಕಾರ್ಯಕ್ರಮ ವಂದಿಸಿದರು.
ವಿ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 