ವಿಬಿ-ಜಿ ರಾಮ್ ಜಿ: ಕೂಲಿಕಾರರಿಗೆ ಉದ್ಯೋಗ ಕಲ್ಪಿಸಿ ಜಿ.ಪಂ. ಉಪಕಾರ್ಯದರ್ಶಿ ಪ್ರಕಾಶ ವಡ್ಡರ ಸೂಚನೆ
VB-G Ram G: Provide employment to laborers G.P. Deputy Secretary Prakash Wadda's notice
ಲೋಕದರ್ಶನ ವರದಿ
ವಿಜಯಪುರ 27: ಗ್ರಾಮೀಣ ಪ್ರದೇಶದ ಪ್ರತಿಯೊಬ್ಬ ಅರ್ಹ ಕುಟುಂಬಕ್ಕೂ ಉದ್ಯೋಗಾವಕಾಶ ಕಲ್ಪಿಸುವುದು ಹಾಗೂ ಗ್ರಾಮಾಭಿವೃದ್ಧಿ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ಅನುಷ್ಠಾನಗೊಳಿಸುವುದು ವಿಬಿ-ಜಿ ರಾಮ್ ಜಿ ಯೋಜನೆಯ ಪ್ರಮುಖ ಉದ್ದೇಶವಾಗಿದ್ದು, ಗ್ರಾಮ ಪಂಚಾಯಿತಿಗಳು ಹೆಚ್ಚಿನ ಕಾಮಗಾರಿಗಳನ್ನು ಗುರುತಿಸಿ ಕೂಲಿಕಾರರಿಗೆ ನಿರಂತರ ಉದ್ಯೋಗ ಒದಗಿಸಬೇಕು ಎಂದು ಜಿಲ್ಲಾ ಪಂಚಾಯತಿಯ ಉಪಕಾರ್ಯದರ್ಶಿಗಳಾದ ಪ್ರಕಾಶ ವಡ್ಡರ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಬಸವನಬಾಗೇವಾಡಿ ತಾಲೂಕಿನ ಮುತ್ತಗಿ ಗ್ರಾಮ ಪಂಚಾಯಿತಿಗೆ ಸೋಮವಾರ ಭೇಟಿ ನೀಡಿದ ಅವರು, ವಿಬಿ-ಜಿ ರಾಮ್ ಜಿ ಯೋಜನೆಯಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿರ್ಮಾಣವಾಗುತ್ತಿರುವ ಅಮೃತ ಸರೋವರ ಕಾಮಗಾರಿಯನ್ನು ಪರೀಶೀಲಿಸಿ, ಕಾಮಗಾರಿ ಸ್ಥಳದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕೂಲಿಕಾರರೊಂದಿಗೆ ನೇರವಾಗಿ ಸಂವಾದ ನಡೆಸಿದ ಬಳಿಕ ಅವರು ಮಾತನಾಡಿದರು. ಕಾಮಗಾರಿ ಸ್ಥಳದಲ್ಲಿ ಶುದ್ಧ ಕುಡಿಯುವ ನೀರು ಹಾಗೂ ನೆರಳಿನ ವ್ಯವಸ್ಥೆ ಸಮರ್ಕವಾಗಿರುವಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದ ಅವರು, ಪ್ರತಿದಿನ 500ಕ್ಕೂ ಹೆಚ್ಚು ಕೂಲಿಕಾರರಿಗೆ ಉದ್ಯೋಗಾವಕಾಶ ಕಲ್ಪಿಸುವ ಗುರಿಯೊಂದಿಗೆ ಕಾಮಗಾರಿಗಳನ್ನು ಯೋಜಿತವಾಗಿ ಅನುಷ್ಠಾನಗೊಳಿಸುವಂತೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಕೆರೆಗಳು, ಕಾಲುವೆಗಳು ಸೇರಿದಂತೆ ಕೈಗೊಳ್ಳಬಹುದಾದ ಎಲ್ಲ ಕಾಮಗಾರಿಗಳನ್ನು ಗುರುತಿಸಿ ಯುಕ್ತಧಾರ ತಂತ್ರಾಂಶದಲ್ಲಿ ತ್ವರಿತವಾಗಿ ಅಳವಡಿಸಿ, ಕೂಲಿಕಾರರಿಗೆ ನಿರಂತರವಾಗಿ ಕೆಲಸ ಒದಗಿಸುವಂತೆ ತಾಂತ್ರಿಕ ಸಹಾಯಕರಿಗೆ ಸೂಚಿಸಿದರು. ಕಾಮಗಾರಿ ಸ್ಥಳದಲ್ಲಿ ಮಣ್ಣಿನ ಗುಣಮಟ್ಟ ಹಾಗೂ ಕಾಮಗಾರಿಯ ಪ್ರಗತಿಯನ್ನು ಖುದ್ದಾಗಿ ಪರೀಶೀಲಿಸಿ ಅಗತ್ಯ ಸಲಹೆಗಳನ್ನು ನೀಡಿದರು.
ತ್ವರಿತವಾಗಿ ಕೂಲಿ ಪಾವತಿ: ವಿಬಿ-ಜಿ ರಾಮ್ ಜಿ ಯೋಜನೆಯಡಿ ಮುಂದಿನ ದಿನಗಳಲ್ಲಿ ಕೂಲಿ ಪಾವತಿಯಲ್ಲಿ ಯಾವುದೇ ವಿಳಂಬವಾಗದಂತೆ ಕ್ರಮ ಕೈಗೊಳ್ಳಲಾಗುತ್ತಿದ್ದು, ನಿಗದಿತ ಅವಧಿಯಲ್ಲೇ ಕೂಲಿ ಮೊತ್ತವನ್ನು ಪಾವತಿಸಲಾಗುವುದು ಎಂದು ಕೂಲಿಕಾರರಿಗೆ ಭರವಸೆ ನೀಡಿದರು. ಪ್ರತಿಯೊಬ್ಬ ಕೂಲಿಕಾರರು ಪ್ರತಿದಿನ ಎರಡು ಬಾರಿ ಎನ್ ಎಂಎಂಎಸ್ ಆಪ್ ಮೂಲಕ ನೈಜ ಹಾಜರಾತಿ ದಾಖಲಿಸುವುದು ಕಡ್ಡಾಯವಾಗಿದ್ದು, ಈ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ತಿಳಿಸಿದರು. ಕೂಲಿಕಾರರು ದುಡಿದು ಗಳಿಸಿದ ಕೂಲಿ ಮೊತ್ತವನ್ನು ಮಕ್ಕಳ ಶಿಕ್ಷಣ ಸೇರಿದಂತೆ ಕುಟುಂಬದ ಅಭಿವೃದ್ಧಿಗೆ ಸದ್ಬಳಕೆ ಮಾಡಿಕೊಳ್ಳುವಂತೆ ಸಲಹೆ ನೀಡಿದರು,
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ 