ವಿದ್ಯಾಚೇತನ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕ ಕಲರವ ಕಾರ್ಯಕ್ರಮಕ್ಕೆ ವ್ಹಿ.ಬಿ.ಕುರಡಿ ಚಾಲನೆ
VB Kuradi drive for the annual arts program of Vidyachetana Senior Primary School
ಸಿಂದಗಿ, 23; ಮನೆಯೇ ಮೊದಲ ಪಾಠಶಾಲೆ ಜನನಿ ತಾನೆ ಮೊದಲ ಗುರು ಎನ್ನುವಂತೆ ಮಕ್ಕಳಿಗೆ ಸಂಸ್ಕಾರ ನೀಡುವಂತ ಜ್ಞಾನವನ್ನು ನೀಡಿ ಮಕ್ಕಳೇ ಆಸ್ತಿಯನ್ನಾಗಿ ಮಾಡಿ ಮಕ್ಕಳಿಗಾಗಿ ಆಸ್ತಿ ಮಾಡಬೇಡಿ ಎಂದು ಆರ್.ಡಿ.ಪಾಟೀಲ ಕಾಲೇಜಿನ ಉಪನ್ಯಾಸ ಪಿ.ವಿ.ನವಲಿಮಠ ಸಲಹೆ ನೀಡಿದರು.
ಪಟ್ಟಣದ ಹೂಗಾರ ಲೇಓಟನಲ್ಲಿರುವ ಸಮತಾ ಸಂಸ್ಥೆಯ ವಿದ್ಯಾಚೇತನ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಸೋಮವಾರ ಸಂಜೆ ಹಮ್ಮಿಕೊಂಡ ವಾರ್ಷಿಕ ಕಲರವ 2ಕೆ25 ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿ, ಎಲ್ಲ ಜೀವಿಗಳಿಗಿಂತ ಮನುಷ್ಯ ಬುದ್ದಿಜೀವಿ. ತನಗೆ ಏನು ಬೇಕು ಅದನ್ನು ಸಾಧಿಸುವ ಬುದ್ದಿ ಶಕ್ತಿಯನ್ನು ಹೊಂದಿದ್ದಾನೆ. ಇಂತಹ ಮನುಷ್ಯ ಜೀವನದಲ್ಲಿ ಹಲವು ಹಂತಗಳನ್ನು ದಾಟುತ್ತಾನೆ. ಹೀಗೆ ದಾಟುವ ಹಂತದಲ್ಲಿ ಶಿಕ್ಷಣಕ್ಕಾಗಿ 15 ರಿಂದ 17 ವರ್ಷಗಳನ್ನು ಮೀಸಲಿಡುತ್ತಾನೆ ಬ್ರಹ್ಮನಿಂದ ಸೃಷ್ಟಿಯಾದ ಮನುಷ್ಯ, ಕತ್ತೆ, ನಾಯಿ, ಗೂಬೆಯ ವೃತ್ತಾಂದ ಮೂಲಕ ವಿದ್ಯಾರ್ಥಿಗಳಿಗೆ ಹಾಗೂ ಪಾಲಕರಿಗೆ ಬದುಕಿನ ಮೌಲ್ಯದ ಕುರಿತು ತಿಳಿಸಿಕೊಟ್ಟರು. ಶಿಕ್ಷಣದ ಜೊತೆಗೆ ಸಂಸ್ಕಾರ ಕಲಿತಾರೆ ಮಕ್ಕಳು ಹೆತ್ತವರನ್ನು ವೃದ್ಧಾಶ್ರಮಕ್ಕೆ ಸೇರಿಸುವುದು ನಿಲ್ಲುತ್ತೆ ಎನ್ನುವ ಕಿವಿಮಾತು ಹೇಳಿದರು.
ತಾಲೂಕಾ ಶಿಕ್ಷಣ ಪ್ರಸಾರಕ ಮಂಡಳಿ ನಿರ್ದೇಶಕರಾದ ವಿ.ಬಿ ಕುರಡಿ ಅವರು ಸಸಿಗೆ ನೀರೂಣಿಸುವ ಮೂಲಕ ಹಾಗೂ ಸರಸ್ವತಿ ಫೋಟೋ ಪೂಜೆ ಮಾಡುವುದರೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಪಾಲಕರ ಪ್ರತಿನಿಧಿಯಾಗಿ ಭಾಗವಹಿಸಿ ಮಾತನಾಡಿದ ಪತ್ರಕರ್ತ ನಾಗೇಶ ತಳವಾರ, ವಿದ್ಯಾರ್ಥಿಗಳ ಉತ್ತಮ ಭವಿಷ್ಯದ ದೃಷ್ಟಿಯಿಂದ ವಿದ್ಯಾಚೇತನ ಶಾಲೆ ನಿರಂತರವಾಗಿ ಶ್ರಮಿಸುತ್ತಿದೆ. ಶಿಕ್ಷಣದ ಜೊತೆಗೆ ಹಲವು ಮೌಲ್ಯಯುತ ಕಾರ್ಯಕ್ರಮಗಳನ್ನು ಸದಾ ಆಯೋಜಿಸುತ್ತಾ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಜ್ಞಾನ ಸಹ ನೀಡುತ್ತಿದೆ. ಸ್ಪರ್ಧಾತ್ಮಕ ಪರೀಕ್ಷೆಗೆ ಮಕ್ಕಳನ್ನು ತಯಾರು ಮಾಡುವ ಹಂತದಲ್ಲಿ ಈ ಶಾಲೆಯ ಶಿಕ್ಷಕರು ಹಗಲಿರುಳು ಶ್ರಮಿಸಿದ್ದಾರೆ. ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳ ಮೂಲಕ ವಿದ್ಯಾರ್ಥಿಗಳ ಸವಾಂರ್ಗೀಣ ಬೆಳವಣಿಗೆಗೆ ಒತ್ತು ಕೊಡುತ್ತಿದ್ದಾರೆ ಎಂದರು.
ಇನ್ನೋರ್ವ ಪಾಲಕ ಪ್ರತಿನಿಧಿ ರಮೇಶ ಜಿ.ಬಮ್ಮಣ್ಣಿ ಉಪಸ್ಥಿತರಿದ್ದರು. ಸಮತಾ ಸಂಸ್ಥೆಯ ಅಧ್ಯಕ್ಷರಾದ ಕುಸಮಾ ಯಾಳಗಿ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿನಿ ಸಂಜನಾ ಭಾವಿಮನಿ ವಿದ್ಯಾರ್ಥಿ ಪ್ರತಿನಿಧಿಯಾಗಿ ವೇದಿಕೆ ಮೇಲಿದ್ದರು.
ಮಕ್ಕಳು ಮುದ್ದು ಮುದ್ದಾಗಿ ನೃತ್ಯ ಮಾಡುವ ಮೂಲಕ ಕಾರ್ಯಕ್ರಮದ ಮೆರಗು ಹೆಚ್ಚಿಸಿದರು. ಶಿಕ್ಷಕಿ ಸಕ್ಕುಬಾಯಿ ಡಾಂಗಿ ವಾರ್ಷಿಕ ವರದಿ ವಾಚನ ಮಾಡಿದರು. ಶಿಕ್ಷಕಿಯಾದ ದೀಕ್ಷಾ ಕನ್ನೊಳ್ಳಿ ಸ್ವಾಗತಿಸಿದರು. ರೂಪಾ ಸೂರ್ಪಗೌಡ, ಪ್ರಗತಿ ಹಿರೇಮಠ ನಿರೂಪಿಸಿದರು. ರಾಧಿಕಾ ಹಿರೇಮಠ ವಂದಿಸಿದರು. ಶಿಕ್ಷಕರಾದ ರಮೇಶ ಯಾಳಗಿ, ಸಂಜೀವಕುಮಾರ ಡಾಂಗಿ, ವಿಕಾಸ ಚೌರ, ಶಿಕ್ಷಕಿ ಸುಮಾ ಬಿರಾದಾರ, ಸಿಬ್ಬಂದಿ ಶಾಂತಾಬಾಯಿ, ನೀಲಮ್ಮ ಹಾಜರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 