ತಿಹಾರ್ ಜೈಲಿನಲ್ಲಿ ವಿನಯ್ ಹೈಡ್ರಾಮಾ: ಗೋಡೆಗೆ ತಲೆ ಚಚ್ಚಿಕೊಂಡ ನಿರ್ಭಯಾ ಅಪರಾಧಿ
ನವದೆಹಲಿ, ಫೆ 20, ನಿರ್ಭಯಾ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಮರಣದಂಡನೆಗೆ ಒಳಗಾಗಿರುವ ನಾಲ್ವರು ಅಪರಾಧಿಗಳಲ್ಲೊಬ್ಬನಾದ ವಿನಯ್ ತಿಹಾರ್ ಜೈಲಿನ ಗೋಡೆಗೆ ತಲೆ ಚಚ್ಚಿಕೊಂಡು ಗಾಯ ಮಾಡಿಕೊಂಡಿರುವ ಘಟನೆ ನಡೆದಿದೆ ಫೆಬ್ರವರಿ 16ರಂದು ಈ ಹೈಡ್ರಾಮಾ ನಡೆದಿದೆ. ಜೈಲು ಕೋಣೆಗೆ ತಲೆ ಚಚ್ಚಿಕೊಳ್ಳುತ್ತಿದ್ದುದನ್ನು ಗಮನಿಸಿದ ತಕ್ಷಣವೇ ಜೈಲು ಅಧಿಕಾರಿಗಳು ತಡೆದಿದ್ದಾರೆ.
ಗೋಡೆಗೆ ಬಲವಾಗಿ ತಲೆ ಚಚ್ಚಿಕೊಂಡಿದ್ದರಿಂದ ವಿನಯ್ ಶರ್ಮಾಗೆ ಗಾಯವಾಗಿದ್ದು, ಚಿಕಿತ್ಸೆ ಕೊಡಿಸಲಾಗಿದೆ ಎಂದು ತಿಳಿದು ಬಂದಿದೆ ನಿರ್ಭಯಾ ಅತ್ಯಾಚಾರಿಗಳ ಪೈಕಿ ಒಬ್ಬನಾಗಿರುವ ವಿನಯ್ ಶರ್ಮಾ ಗೋಡೆಗೆ ತಲೆ ಚೆಚ್ಚಿಕೊಂಡಿರುವುದು ಸತ್ಯ, ತಲೆಗೆ ಗಾಯವಾಗಿದೆ ಎಂದು ಜೈಲಿನ ಮೂಲಗಳು ಖಚಿತಪಡಿಸಿವೆ. ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಾಲ್ವರು ಅಪರಾಧಿಗಳನ್ನು ಮಾರ್ಚ್ 3ರಂದು ಗಲ್ಲಿಗೇರಿಸುವಂತೆ ದೆಹಲಿ ನ್ಯಾಯಾಲಯ ಸೋಮವಾರ ಆದೇಶಿಸಿದೆ. ಮುಖೇಶ್ ಕುಮಾರ್ ಸಿಂಗ್(32), ಪವನ್ ಗುಪ್ತಾ(25), ವಿನಯ್ ಕುಮಾರ್ ಶರ್ಮಾ(26), ಅಕ್ಷಯ್ ಕುಮಾರ್(31) ಈ ನಾಲ್ವರು ಅಪರಾಧಿಗಳು ಗಲ್ಲು ಶಿಕ್ಷೆಗೆ ಗುರಿಯಾಗಿದ್ದಾರೆ.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 