ಸೌರವ್ ಗಂಗೂಲಿಗೆ ಅಭಿನಂದನೆ ಸಲ್ಲಿಸಿದ ವಿವಿಎಸ್ ಲಕ್ಷ್ಮಣ್
ನವದೆಹಲಿ, ಅ 15: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿರುವ ಭಾರತದ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಅವರಿಗೆ ಅಭಿನಂದನೆ ಸಲ್ಲಿಸಿರುವ ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್, ದಾದಾ ನೇತೃತ್ವದಲ್ಲಿ ಭಾರತದ ಕ್ರಿಕೆಟ್ ಏಳಿಗೆ ಮುಂದುವರಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿರುವವರಲ್ಲಿ ಏಕೈಕ ವ್ಯಕ್ತಿ ಸೌರವ್ ಗಂಗೂಲಿ ಆಗಿದ್ದಾರೆ. ಆದ್ದರಿಂದ ಮುಂದಿನ ಬಿಸಿಸಿಐ ಅಧ್ಯಕ್ಷರಾಗುವುದು ಸೌರವ್ ಗಂಗೂಲಿ ಬಹುತೇಕ ಖಚಿತವಾಗಿದೆ. ಈ ಬಗ್ಗೆ ಸ್ಪಷ್ಟತೆ ಸಿಗುತ್ತಿದ್ದಂತೆ ವಿವಿಎಸ್ ಲಕ್ಷ್ಮಣ್ ಅವರು ಟ್ವಿಟರ್ ನಲ್ಲಿ ಸಹ ಮಾಜಿ ಆಟಗಾರನಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಜತೆಗೆ, ನಿಮ್ಮ ಸಾರಥ್ಯದಲ್ಲಿ ಭಾರತೀಯ ಕ್ರಿಕೆಟ್ ಇನ್ನಷ್ಟು ಏಳಿಗೆ ಸಾಧಿಸಲಿದೆ ಹಾಗೂ ಅಧ್ಯಕ್ಷ ಸ್ಥಾನದಲ್ಲಿ ನಿಮಗೆ ಯಶ ಲಭಿಸಲಿ ಎಂದು ಹಾರೈಸಿದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಗಂಗೂಲಿ, ಧನ್ಯವಾದಗಳು ವಿವಿಎಸ್, ಇದರಲ್ಲಿ ನಿಮ್ಮ ಕೊಡುಗೆ ಕೂಡ ಅತಿ ಮುಖ್ಯ ಎಂದು ಹೇಳಿದ್ದಾರೆ. ವಿವಿಎಸ್ ಲಕ್ಷ್ಮಣ್ ಅವರು ಸಚಿನ್ ತೆಂಡೂಲ್ಕರ್ ಹಾಗೂ ಸೌರವ್ ಗಂಗೂಲಿ ಜತೆ ಕ್ರಿಕೆಟ್ ಸಲಹಾ ಸಮಿತಿಯಲ್ಲಿ ದೀರ್ಘ ಕಾಲ ಸೇವೆ ಸಲ್ಲಿಸಿದ್ದರು. ಈ ವೇಳೆ ಭಾರತ ತಂಡದ ಮುಖ್ಯ ಕೋಚ್ ಆಗಿ ಅನಿಲ್ ಕುಬ್ಳೆ ನೇಮಿಸಿದ್ದರು. 2017ರಲ್ಲಿ ಕುಂಬ್ಳೆ ಸ್ಥಾನಕ್ಕೆ ರಾಜೀನಾಮೆ ಸಲಲಿಸಿದ ಬಳಿಕ ಕ್ರಿಕೆಟ್ ಆಡಳಿತ ಮಂಡಳಿ ರವಿಶಾಸ್ತ್ರಿ ಅವರನ್ನು ನೇಮಿಸಿತ್ತು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 