ವಾಜಪೇಯಿ ಅವರ ಜನ್ಮದಿನ ಆಚರಣೆ
Vajpayee's birthday celebration
ವಾಜಪೇಯಿ ಅವರ ಜನ್ಮದಿನ ಆಚರಣೆ
ಬ್ಯಾಡಗಿ 25: ಜನಮಾನಸದಲ್ಲಿ ನೆನಪಾಗಿರುವ ದೇಶಕಂಡ ಧೀಮಂತ ನಾಯಕ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನವನ್ನು ಬಿಜೆಪಿ ಸುಶಾಸನ ದಿನವನ್ನಾಗಿ ಆಚರಿಸುತ್ತಿದೆ ಎಂದು ಮಾಜಿ ಶಾಸಕ ವಿರುಪಾಕ್ಷಪ್ಪ ಬಳ್ಳಾರಿ ಹೇಳಿದರು.
ಅವರು ಪಟ್ಟಣದ ಬಿಜೆಪಿ ತಾಲೂಕಾ ಕಚೇರಿಯಲ್ಲಿ ನಡೆದ ವಾಜಪೇಯಿ ಅವರ 100 ನೇ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.ಜನಸಂಘದ ಕಾಲದಿಂದಲೂ ರಾಜಕೀಯದಲ್ಲಿದ್ದು, ಸಾರ್ವಜನಿಕವಾಗಿ ಒಂದೇ ಒಂದು ಕಪ್ಪು ಚುಕ್ಕೆಯಿಲ್ಲದೇ ಸೇವೆ ಸಲ್ಲಿಸಿದ ಕೀರ್ತಿ ಅಟಲ್ ಬಿಹಾರಿ ವಾಜಪೇಯಿ ಅವರದ್ದಾಗಿದೆ ಎಂದರು.
ತಾಲೂಕಾ ಬಿಜೆಪಿ ಅಧ್ಯಕ್ಷ ಶಿವಯೋಗಿ ಶಿರೂರ ಮಾತನಾಡಿ ಬಿಜೆಪಿ ಮೊದಲ ಹೀನಾಯವಾಗಿ ಪರಾಭವ ಹೊಂದಿದಾಗ ಪಲಾಯನಂ ಎಂಬ ಧ್ಯೆಯ ವಾಕ್ಯದೊಂದಿಗೆ ಪಕ್ಷ ಕಟ್ಟಿ ಅಧಿಕಾರಕ್ಕೆ ತಂದು ಪ್ರಧಾನಿಯಾಗಿ ಅತ್ಯುತ್ತಮ ಆಡಳಿತ ನೀಡಿದರು. ಅತೀ ಸರಳ ಸಜ್ಜನ ರಾಜಕಾರಣಿಯಾಗಿದ್ದ ವಾಜಪೇಯಿಯವರು ಪತ್ರಕರ್ತರು, ಕವಿಗಳೂ ಆಗಿದ್ದರು ಎಂದರು.
ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿ ವಿನಯಕುಮಾರ್ ಹಿರೇಮಠ, ಸುರೇಶ್ ಯತ್ನಳ್ಳಿ, ಚಂದ್ರಣ್ಣ ಶೆಟ್ಟರ, ಸರೋಜಾ ಉಳ್ಳಾಗಡ್ಡಿ, ವಿಷ್ಣು ಬೆನ್ನೂರ, ಸುರೇಶ್ ಉದ್ಯೋಗಣ್ಣನವರ ಸೇರಿದಂತೆ ಇತರರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 