ವಾಜಪೇಯಿಯವರು ಎಂದಿಗೂ ಒತ್ತಡಕ್ಕೆ ಮಣಿಯಲಿಲ್ಲ: ಪ್ರಧಾನಿ
ನವದೆಹಲಿ 20: ಭಾರತದ ಮಾಜಿ ಪ್ರಧಾನ ಮಂತ್ರಿ ದಿವಂಗತ ಅಟಲ್ ಬಿಹಾರಿ ವಾಜಪೇಯಿಯವರು ತಮ್ಮ ಬದುಕನ್ನು ಈ ದೇಶದ ಜನರಿಗಾಗಿ ಮುಡಿಪಾಗಿಟ್ಟಿದ್ದರು. ಭಾರತೀಯರ ಸೇವೆ ಮಾಡಲು ಅವರು ಯುವಕರಿರುವಾಗಲೇ ನಿರ್ಧರಿಸಿದ್ದರು. ಈ ದೇಶದಲ್ಲಿ ಕೇವಲ ಒಂದೇ ಒಂದು ಪಕ್ಷ ತನ್ನ ಪ್ರಾಬಲ್ಯ ಹೊಂದಿದ್ದಾಗ ಅವರು ರಾಜಕೀಯ ಜೀವನ ಪ್ರವೇಶಿಸಿದರು ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಸ್ಮರಿಸಿಕೊಂಡರು.
ದೆಹಲಿಯಲ್ಲಿ ಇಂದು ಅಟಲ್ ಜೀಯವರ ಸ್ಮರಣಾರ್ಥ ನಡೆದ ಪ್ರಾರ್ಥನಾ ಸಭೆಯಲ್ಲಿ ಮಾತನಾಡಿದ ಅವರು, ವಿರೋಧ ಪಕ್ಷದ ಸ್ಥಾನದಲ್ಲಿ ಕುಳಿತು ಅವರು ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಆದರೆ ತಮ್ಮ ತತ್ವ, ಆದರ್ಶಗಳಿಗೆ ಅವರೆಂದೂ ರಾಜಿಯಾಗಿರಲಿಲ್ಲ. ಭಾರತವನ್ನು ಪ್ರಬಲ ಪರಮಾಣು ಶಕ್ತಿ ರಾಷ್ಟ್ರವನ್ನಾಗಿ ಮಾಡಲು ಅವರ ಅವಿರತ ಪರಿಶ್ರಮದಿಂದ ವಿಜ್ಞಾನ ಕ್ಷೇತ್ರದಲ್ಲಿ ಮಹತ್ತರ ಸಾಧನೆಗಳಾಗಿವೆ. ಅವರು ಯಾವುದೇ ಒತ್ತಡಗಳಲ್ಲಿ ಬಳುಕಲಿಲ್ಲ ಎಂದರು.
ಅಟಲ್ ಜೀಯವರು 13 ದಿನಗಳ ಕಾಲ ಪ್ರಧಾನಿಯಾಗಿದ್ದಾಗ ಯಾವುದೇ ಪಕ್ಷ ಅವರಿಗೆ ಬೆಂಬಲ ನೀಡಲು ಸಿದ್ದವಿರಲಿಲ್ಲ. ಇದರಿಂದಾಗಿ ಸಕರ್ಾರ ಬಿದ್ದುಹೋಯಿತು. ನಿನ್ನೆ ಏಷ್ಯನ್ ಗೇಮ್ಸ್ ನಲ್ಲಿ ಚಿನ್ನದ ಪದಕ ಗಳಿಸಿದ ಬಜ್ ರಂಗ್ ಪುನಿಯಾ ತಮಗೆ ಸಿಕ್ಕಿದ ಚಿನ್ನದ ಪದಕವನ್ನು ಅಟಲ್ ಜೀಗೆ ಅಪರ್ಿಸಿದರು. ಇದರಿಂದ ಅವರ ವ್ಯಕ್ತಿತ್ವ ಎಂತಹದ್ದು ಎಂದು ಗೊತ್ತಾಗುತ್ತದೆ ಎಂದರು.
ಬಿಜೆಪಿ ಹಿರಿಯ ನಾಯಕ ಎಲ್ ಕೆ ಆಡ್ವಾಣಿ ಮಾತನಾಡಿ, ನಾನು ಅನೇಕ ಸಾರ್ವಜನಿಕ ಸಭೆಗಳನ್ನುದ್ದೇಶಿಸಿ ಮಾತನಾಡಿದ್ದೇನೆ. ಆದರೆ ಇಂತಹ ಸಭೆಯನ್ನುದ್ದೇಶಿಸಿ ಅಟಲ್ ಜೀ ಇಲ್ಲದೆ ಮಾತನಾಡಬೇಕಾಗಿ ಬರಬಹುದೆಂದು ಭಾವಿಸಿರಲಿಲ್ಲ.
ನನ್ನ ಮತ್ತು ಅಟಲ್ ಜೀಯವರ ಸ್ನೇಹ 65 ವರ್ಷಗಳಷ್ಟು ಹಿಂದಿನದ್ದು. ಇಷ್ಟು ವರ್ಷಗಳಲ್ಲಿ ಅವರನ್ನು ಹತ್ತಿರದಿಂದ ನೋಡಿದ್ದೇನೆ. ಒಟ್ಟಿಗೆ ಕೆಲಸ ಮಾಡುತ್ತಾ ನಮ್ಮ ಅನುಭಗಳನ್ನು ಹಂಚಿಕೊಂಡುತ್ತಾ ಒಟ್ಟಿಗೆ ಓದುತ್ತಾ ಸಾಗಿ ಬಂದಿದ್ದೆವು ಎಂದು ನೆನಪು ಮಾಡಿಕೊಂಡರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 