ವಾಲ್ಮೀಕಿ ಮಹರ್ಷಿ ಜಯಂತಿ ಆಚರಣೆ
ಲೋಕದರ್ಶನವರದಿ
ಹಾವೇರಿ : ಮಾನವನ ಬದುಕಿಗೆ ವಾಲ್ಮೀಕಿ ಮಹಷರ್ಿಯವರ ರಾಮಾಯಣ ಮಹಾಕಾವ್ಯ ಶ್ರೇಷ್ಠವಾಗಿದೆ ಎಂದು ಸವಣೂರ ತಾಲೂಕಿನ ಹಿರೇಮುಗದೂರ ಗ್ರಾಮದಲ್ಲಿ ವೀರಮದಕರಿ ವಾಲ್ಮೀಕಿ ಸಂಘದ ವತಿಯಿಂದ ವಾಲ್ಮೀಕಿ ಮಹಷರ್ಿಯವರ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ ವೀರಮದಕರಿ ವಾಲ್ಮೀಕಿ ಸಂಘದ ಮುಖಂಡ ಕೊಟೆಪ್ಪ ತಳವಾರ ಮಾತನಾಡಿದರು.
ಪ್ರತಿಯೊಬ್ಬರೂ ಮೌಲ್ಯಯುತವಾಗಿ ಬದುಕಲು ಹೇಗೆ ಬಾಳಬೇಕು ಎಂದು ತಮ್ಮ ಕಾವ್ಯದಲ್ಲಿ ವಿವರವಾಗಿ ತಿಳಿಸಿದ್ದಾರೆ.
ಕುಟುಂಬ ಹಾಗೂ ಸಮಾಜ ಜೀವಿಯಾಗಿ ಎಲ್ಲರೊಂದಿಗೆ ಬೆರತು ಬಾಳುವ ಸಂದೇಶ ನೀಡಿದವರು ಮಹರ್ಷಿ ವಾಲ್ಮೀಕಿಯವರಾಗಿದ್ದು, ಅವರ ಜೀವನ ದಾರಿಯೇ ಮನುಕುಲಕ್ಕೆ ದಾರಿದ್ವೀಪವಾಗಿದೆ. ಅವರ ಜೀವನ ಆದರ್ಶಗಳನ್ನು ಅಳವಡಿಸಿಕೊಂಡು ಬದುಕಿದರೆ ಉತ್ತಮ ಸಮಾಜ ನಿಮರ್ಾಣ ಸಾಧ್ಯವಾಗಲಿದೆ. ಎಲ್ಲರೂ ಅವರ ತತ್ವ ಸಿದ್ಧಾಂತ ಪಾಲಿಸೋಣ ಎಂದು ಕೊಟೆಪ್ಪ ತಳವಾರ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ವಾಲ್ಮೀಕಿ ಸಮುದಾಯದ ಹಿರಿಯ ಮುಖಂಡರು ಹಾಗೂ ಗ್ರಾಪಂ ಮಾಜಿ ಸದಸ್ಯರಾದ ಮಲ್ಲಪ್ಪ ಮಾ ತಳವಾರ, ಗ್ರಾಪಂ ಸದಸ್ಯ ಈರಣ್ಣ ಚಪ್ಪರದಳ್ಳಿಮಠ. ವಾಲ್ಮೀಕಿ ಸಮುದಾಯದ ಮುಖಂಡರಾದ ಮಾಲತೇಶ ತಳವಾರ, ಚಂದ್ರಪ್ಪ ಸೋ ತಳವಾರ, ಮಲ್ಲಾರೆಪ್ಪ ತಳವಾರ,ಹನುಮಂತಪ್ಪ ತಳವಾರ, ರವಿ ತಳವಾರ, ನಿಂಗಪ್ಪ ತಳವಾರಚಂದ್ರ ಟಿ.ಸಣ್ಣಪ್ಪ ಹೊಸಮನಿ ಸೇರಿದಂತೆ ವಾಲ್ಮೀಕಿ ಸಮುದಾಯದ ಮುಖಂಡರು ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 