ವಂದೇಮಾತರಂ ಹೇಳಿ, ಇಲ್ಲ ದೇಶ ಬಿಡಿ: ಕೇಂದ್ರ ಸಚಿವರ ಅಣಿಮುತ್ತು.!
ಅಹಮದಾಬಾದ್, ಜ 19 : ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ, ವಾಸ ಮಾಡುವ ಹಕ್ಕು ನಿಮಗಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಹೇಳಿ ದೊಡ್ಡ ವಿವಾದ ಎಳೆದುಕೊಂಡಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆ ವಿಚಾರವಾಗಿ ಪ್ರತಿಕ್ರಿಯೆ ನೀಡುವ ಸಮಯದಲ್ಲಿ ಈ ಅಭಿಪ್ರಾಯವಾಗಿ ವ್ಯಕ್ತಪಡಿಸಿದ್ದಾರೆ.
70 ವರ್ಷಗಳ ಹಿಂದೆಯೇ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ಬರಬೇಕಾಗಿತ್ತು. ಆದರೆ, ಕಾಂಗ್ರೆಸ್ಸಿಗರು ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿಭಜನೆಯ ಪ್ರತೀಕ ಎಂಬಂತೆ ಬಿಂಬಿಸುತ್ತಿದ್ದಾರೆ ಎಂದೂ ದೂರಿದರು. ರಾಜಕಾರಣಿಗಳು ಮತ್ತು ನಾಯಕರು ದೇಶ ವಿಭಜನೆ ನಡೆಯುವ ಸಮಯದಲ್ಲಿ ಮೌನವಾಗಿದ್ದರು ಎಂದೂ ಟೀಕಿಸಿದರು.
ಪಾಕಿಸ್ತಾನ, ಬಾಂಗ್ಲಾದೇಶ, ಆಫ್ಘನ್ನಲ್ಲಿ ಹಿಂದುಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತಿದೆ . ಆ ದೇಶಗಳಲ್ಲಿ ಅವರಿಗೆ ಕಿರುಕುಳ ನೀಡಲಾಗುತ್ತಿದೆ ಭಾರತಬಿಟ್ಟರೆ ಬೇರೆ ಕಡೆ ಅವರಿಗೆ ನೆಲೆಯಿಲ್ಲ ಎಂದೂ ಸಚಿವರು ಹೇಳಿದ್ದಾರೆ.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 