ವಣ್ಣೂರ ಗ್ರಾಮದ ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮ
Vannur village school's annual friendship conference program
ನೇಸರಗಿ 02 : ವಿದ್ಯಾರ್ಥಿಗಳು ಒಳ್ಳೆಯ ವಿದ್ಯಾರ್ಜನೆ ಮಾಡಿ ಯಶಸ್ಸಿನತ್ತ ದಾಪುಗಾಲು ಇಡಬೇಕೆಂದು ಕಿತ್ತೂರ ಶಾಸಕ ಬಾಬಾಸಾಹೇಬ ಪಾಟೀಲ ಹೇಳಿದರು. ಸಮೀಪದ ವಣ್ಣೂರ ಗ್ರಾಮದ ಶಾಂತಿನಿಕೇತನ ಕನ್ನಡ ಮತ್ತು ಆಂಗ್ಲ ಮಾದ್ಯಮ ಶಾಲೆಯ 19 ನೇ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಉನ್ನತ ಗುರಿ ಇಟ್ಟುಕೊಂಡು ಮೊಬೈಲ್ ಗೀಳು ಬಿಟ್ಟು ನಿತ್ಯ ಓದಿನತ್ತ ವಿದ್ಯಾರ್ಥಿಗಳು ತೊಡಗಿಕೊಂಡರೆ ಉತ್ತಮ ಅಂಕಗಳೊಂದಿಗೆ ಪಾಸಾಗಿ ಜೀವನದ ಯಶಸ್ಸಿನ ಮೆಟ್ಟಿಲು ಹತ್ತಲು ಸಾದ್ಯ ಇದರತ್ತ ಗಮನಹರಿಸಬೇಕು. ವಿದ್ಯಾರ್ಥಿಗಳಿಗೆ ಪರಿಶ್ರಮದಿಂದ ಗುರಿಮುಟ್ಟಲು ಸಾಧ್ಯ ಎಂದರು.
ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಜಿ.ಪಂ ಮಾಜಿ ಸದಸ್ಯ ನಿಂಗಪ್ಪ ಅರಕೇರಿ, ಟಿ.ಆರ್.ಕಾಗಲ, ದೇಶನೂರ ಪಿಕೆಪಿಎಸ್ ಅಧ್ಯಕ್ಷ ಚನ್ನಪ್ಪ ಕಮತಗಿ, ಸಿದ್ದನಗೌಡ ಪಾಟೀಲ, ಶೇಖರ ಕೊಮನ್ನವರ, ಹಣಮಂತ ದೊಡ್ಡಣ್ಣವರ, ಎಚ್ ಡಿ.ಕಿಲ್ಲೇದಾರ, ಎಸ್ ಎಲ್.ರಾಮಾನಟ್ಟಿ, ಆರ್ ಆರ್ ಪಾಟೀಲ, ಎಸ್.ಎಪ್ ನಾಯಕ,ಎಪ್ .ಎಂ.ಭಟ್ಟಂಗಿ, ಸಂಸ್ಥೆಯ ಅಧ್ಯಕ್ಷ ಸುರೇಶ ಗಂಗನ್ನವರ, ರಾಮಸಿದ್ದಪ್ಪ ಕಡಬಿ, ಆರ್.ಬಿ.ಶೆಬನ್ನವರ,ಡಾ. ಪಿ.ವಿ.ಹಿರೇಮಠ,ಮಂಜುಳಾ ಪಾಟೀಲ, ಸಿಆರ್.ಪಾಟೀಲ, ಶಿವಲಿಂಗಪ್ಪ ಅಪ್ಪನ್ನವರ, ಶಿಕ್ಷಕರು, ವಿದ್ಯಾರ್ಥಿಗಳು ಮೊದಲಾದವರು ಪಾಲ್ಗೊಂಡಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 