ಬೆಟಗೇರಿ ಗ್ರಾಮದಲ್ಲಿ ಕಟ್ಟಾ ವಾರ ಆಚರಣೆ
Vara celebration in Betageri village
ಬೆಟಗೇರಿ, 30 : ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಜನ-ಜಾನುವಾರುಗಳಿಗೆ ರೋಗ-ರುಜೀನ ಬರದಂತೆ ಹಾಗೂ ಸಕಾಲಕ್ಕೆ ಮಳೆಯಾಗದಿದ್ದ ಕಾರಣ ಮಳೆಗಾಗಿ ಇದೇ ಮಂಗಳವಾರ ಜು.1 ಸೇರಿದಂತೆ ಮುಂದೆ ಬರುವ ವಾರದ ಪ್ರತಿ ಮಂಗಳವಾರ ಜು.8, ಶುಕ್ರವಾರ ಜು.11 ಮಂಗಳವಾರ ಜು.15, ಮಂಗಳವಾರ ಜು.22 ಸೇರಿ ಒಟ್ಟು 5 ದಿನ ಸಂಪ್ರದಾಯದಂತೆ ವಾರ ಹಿಡಿಯಲಾಗಿದೆ.
ಜು.1ರಂದು ಮುಂಜಾನೆ 9 ಗಂಟೆಗೆ ಊರಿನ ಪ್ರಮುಖ ಬೀದಿಗಳಲ್ಲಿ ಸಕಲ ವಾದ್ಯಮೇಳಗಳೊಂದಿಗೆ ಪುರ ದೇವರ ಪಲ್ಲಕ್ಕಿ ಉತ್ಸವದ ಮೂಲಕ ಗ್ರಾಮದ ನಾಲ್ಕು ದಿಕ್ಕುಗಳ ಮುಖ್ಯ ರಸ್ತೆಗಳಿಗೆ ಊರಿನ ಸೀಮೆಗೆ ಕರಿ ಕಟ್ಟುವದು ನಡೆದ ಬಳಿಕ ಸ್ಥಳೀಯರಿಂದ ಪುರದೇವರ ದೇವಸ್ಥಾನಕ್ಕೆ ತೆರಳಿ ಪೂಜೆ, ನೈವೇದ್ಯ ಸಮರ್ಿಸುವ, ದೇವಾಲಯ ಕಟ್ಟೆಗಳಿಗೆ ನೀರು ಹಾಕುವದು ಸೇರಿದಂತೆ ಕಟ್ಟಾ ವಾರ ಆಚರಣೆಯ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ.
ಬೆಟಗೇರಿ ಗ್ರಾಮದಲ್ಲಿ ಕಟ್ಟಾ ವಾರ ಆಚರಣೆ : ಬೆಟಗೇರಿ ಗ್ರಾಮದಲ್ಲಿ ನಮ್ಮ ಪುರ್ವಜರು ವಾರ ಬಿಡುವ ಪದ್ದತಿ ಅನುಸರಿಸಿಕೊಂಡು ಬಂದಿದ್ದರಿಂದ ವಾರದ ಮಂಗಳವಾರ ಮತ್ತು ಶುಕ್ರವಾರ ದಿನ ಸೇರಿ ಒಟ್ಟು 4 ಮಂಗಳವಾರ, 1 ಶುಕರವಾರ ದಿನ ಇಡೀ ಗ್ರಾಮದ ರೈತರಾ್ಯರೂ ವಾರದ ಈ 5 ದಿನಗಳಂದು ಕೃಷಿ ಚಟುವಟಿಕೆ ಕೈಗೊಳ್ಳುವಂತಿಲ್ಲ, ವಾರದ ದಿನ ಎಲ್ಲರ ಮನೆಯಲ್ಲೂ ರೊಟ್ಟಿ ಮಾಡುವಂತಿಲ್ಲ, ವಗ್ಗರಣೆಯಂತೂ ಹಾಕುವಂತಿಲ್ಲ, ಮಾಂಸಾಹಾರ ಅಡುಗೆ ತಯಾರಿಸುವಂತಿಲ್ಲ, ಊರಿನಲ್ಲಿರುವ ಕಿರಾಣಿ, ಮದ್ಯದಂಗಡಿ, ಚಹಾ ಅಂಗಡಿ, ಪಾನ್ ಬೀಡಾಂಗಡಿಗಳು ಸೇರಿದಂತೆ ಹೇರ್ಕಟಿಂಗ್ ಅಂಗಡಿ ಸಹ ಬಾಗಿಲು ತೆರೆಯದೇ ಬಂದ್ ಮಾಡಲಾಗುವುದು. ಆಸ್ಪತ್ರೆ ಮತ್ತು ಓಷಧ ಅಂಗಡಿ ಮಾತ್ರ ಬಾಗಿಲು ತೆರೆದಿರುತ್ತವೆ. ವಾರ ಹಿಡಿದ ಪ್ರಯುಕ್ತ ವಾರದ 5 ದಿನ ಬೆಟಗೇರಿ ಗ್ರಾಮ ಸಂಪೂರ್ಣ ಬಂದ್ ಆಚರಿಸಿದಂತಿರುತ್ತದೆ ಎಂದು ಸ್ಥಳೀಯ ವಾರ ಹಿಡಿದ ಆಯೋಜನೆ ಸಮಿತಿಯ ಹಿರಿಯ ನಾಗರಿಕ ಮಾಯಪ್ಪ ಬಾಣಸಿ ತಿಳಿಸಿದ್ದಾರೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 