ವಿವಿಧ ಸಮಿತಿಗಳು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು: ಜಿಲ್ಲಾಧಿಕಾರಿ
Various committees should perform their duties responsibly: District Collector
ವಿವಿಧ ಸಮಿತಿಗಳು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು: ಜಿಲ್ಲಾಧಿಕಾರಿ
ಕೊಪ್ಪಳ 27: ಗೌರವಾನ್ವಿತ ಉಪ ಲೋಕಾಯುಕ್ತರು ಕೊಪ್ಪಳ ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಅವರ ಕಾರ್ಯಕ್ರಮಗಳ ನಿರ್ವಹಣೆಗಾಗಿ ರಚಿಸಿದ ವಿವಿಧ ಸಮಿತಿಗಳು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕೆಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಹೇಳಿದರು.
ಅವರು ಸೋಮವಾರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಗೌರವಾನ್ವಿತ ಉಪ ಲೋಕಾಯುಕ್ತರು ಕೊಪ್ಪಳ ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ರಚಿಸಿದ ವಿವಿಧ ಸಮಿತಿಯ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದರು.
ವೇದಿಕೆ ಕಾರ್ಯಕ್ರಮಕ್ಕೆ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ನಲ್ಲಿ ಸರಿಯಾದ ವ್ಯವಸ್ಥೆ ಮಾಡಬೇಕು. ಟೇಬಲ್, ಕುರ್ಚಿ, ಮೈಕ್ ಮತ್ತು ಬ್ಯಾನರ್ಗಳನ್ನು ಸರಿಯಾಗಿ ಹಾಕಬೇಕು. ಸಾರ್ವಜನಿಕರ ಅಹವಾಲು ಮತ್ತು ಸ್ವೀಕೃತಿ ಅರ್ಜಿಗಳನ್ನು ಪಡೆಯಲು ವಿಶೇಷ ವ್ಯವಸ್ಥೆ ಮಾಡಬೇಕು ಎಂದರು.
ಗೌರವಾನ್ವಿತ ಉಪಲೋಕಾಯುಕ್ತರು ಅಕ್ಟೋಬರ್ 29 ರಿಂದ 31 ರವರೆಗೆ ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದು,್ದ ಅಕ್ಟೋಬರ್ 29 ರಂದು ವಿವಿಧ ಸ್ಥಳಗಳ ಭೇಟಿ ಮತ್ತು ಅಕ್ಟೋಬರ್ 30 ಮತ್ತು 31 ರಂದು ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸುವರು. ಅವರ ಪ್ರವಾಸದ ಸಂದರ್ಭದಲ್ಲಿ ಸಾರಿಗೆ ಸಮಿತಿಯವರು ಮಾನ್ಯರಿಗೆ ಸರಿಯಾದ ವಾಹನಗಳ ವ್ಯವಸ್ಥೆ ಮಾಡಬೇಕೆಂದು ಹೇಳಿದರು.
ಜಿಲ್ಲೆಯ ವಿವಿಧ ಕಡೆಯಿಂದ ಬರುವ ಜನರಿಗೆ ತೊಂದರೆಯಾಗದಂತೆ ಅವರಿಗೆ ಸರಿಯಾದ ಆಸನ ವ್ಯವಸ್ಥೆ ಹಾಗೂ ಕುಡಿಯುವ ನೀರು ಸೇರಿದಂತೆ ಇತರೆ ವ್ಯವಸ್ಥೆಗಳನ್ನು ಮಾಡಬೇಕು. ಸ್ವಾಗತ ಸಮಿತಿ, ವೇದಿಕೆ, ವಾಹನ, ವಸತಿ, ಪ್ರಚಾರ, ಆಹಾರ, ಸಾರ್ವಜನಿಕ ಅಹವಾಲು, ಭದ್ರತಾ ಸಮಿತಿಗಳು ಸೇರಿದಂತೆ ಇತರೆ ವಿವಿಧ ಸಮಿತಿಯ ಸದಸ್ಯರು ತಮಗೆ ನೀಡಿದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕೆಂದು ಹೇಳಿದರು.
ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಆರ್. ಹೇಮಂತಕುಮಾರ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಮಂಜುನಾಥ ಗುಂಡೂರ, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರರಾದ ಹೇಮಂತ್,
ಜಿಲ್ಲಾ ಪಂಚಾಯತ ಮುಖ್ಯ ಯೋಜನಾಧಿಕಾರಿ ಡಿ. ಮಂಜುನಾಥ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕರ್ಣಕುಮಾರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 