ದಿ,30 ರಂದು ಉರ್ದು ದಿನಾಚರಣೆ ಪ್ರಯುಕ್ತ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆ

ದಿ,30 ರಂದು ಉರ್ದು ದಿನಾಚರಣೆ ಪ್ರಯುಕ್ತ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆ   Various competitions for students on the occasion of Urdu Day on the 30th

ಕೊಪ್ಪಳ 24: ಫಿರ್ದೋಸ್ ಸಾಂಸ್ಕೃತಿಕ ಕ್ರೀಡೆ ಮತ್ತು ತರಬೇತಿ ಸಂಸ್ಥೆ ವತಿಯಿಂದ ನಗರದ ಬಾಲಕರ ಪದವಿ ಪೂರ್ವ ಕಾಲೇಜು ಆವರಣದಲ್ಲಿ ದಿ, 30 ತರ ರವಿವಾರ ಬೆಳಿಗ್ಗೆ 10.30 ಗಂಟೆಗೆ ಉರ್ದು ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಭಾಷಣ ಸ್ಪರ್ಧೆ ಸೇರಿದಂತೆ ವಿವಿಧ ಕಾರ್ಯಕ್ರಮ ಹಾಗೂ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ಕನ್ನಡ ಸಮಾರಂಭ ಜರುಗಲಿದೆ,   

ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಕರ್ನಾಟಕ ಉರ್ದು ಅಕಾಡೆಮಿ ಅಧ್ಯಕ್ಷರಾದ ಮುಫ್ತಿ ಮೌಲಾನ ಮಹಮ್ಮದ್ ಅಲಿ ಖಾಜಿ ಕೊಪ್ಪಳ ಯು ಸೂಫಿ ಯ ಮಸೀದಿಯ ಪೇಶ ಇಮಾಮ್ ಮುಫ್ತಿ ಮೌಲಾನ ಮೊಹಮ್ಮದ್ ನಜೀರ್ ಅಹಮದ್ ಖಾದ್ರಿ ತಸ್ಕಿನಿ ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯದ ಕುಮಾರಿ ಯೋಗಿನಿ ಅಕ್ಕನವರು ಹಿರಿಯ ವೈದ್ಯ ಡಾ, ಕೆ.ಜಿ. ಕುಲಕರ್ಣಿ ನಗರ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿ ಜಯಪ್ರಕಾಶ್ ಕಾಲೇಜಿನ ಉಪ ಪ್ರಾಚಾರ್ಯ ಶರಣ ಬಸವಣ್ಣ ಗೌಡ ಸೈಯದ್ ಫೌಂಡೇಶನ್ ಅಧ್ಯಕ್ಷ  ಡಾ,ಕೆ ಎಂ ಸಯ್ಯದ್, ಕಾನೂನು ಮಾಪನ ಶಾಸ್ತ್ರ ಇಲಾಖೆಯ ನೀರೀಕ್ಷಕ ಎಂ ಬದಿಯದ್ದೀನ್ ಅಹಮದ್ ನವೀದ್, ಹಿರಿಯ ಪತ್ರಕರ್ತ ಎಂ ಸಾಧಿಕ್ ಅಲಿ ಪಾಲ್ಗೊಳ್ಳಲಿದ್ದು ಸಂಸ್ಥೆಯಾ ಅಧ್ಯಕ್ಷ ಮೊಹಮ್ಮದ್ ರಫಿ ಯುದ್ದೀನ್ ಅಹಮದ್ ರವರು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ ಕಾರಣ ವಿದ್ಯಾರ್ಥಿಗಳು ವಿದ್ಯಾರ್ಥಿಗಳ ಪಾಲಕರು ಸಾರ್ವಜನಿಕರು ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿ ಸರ್ವರನ್ನು ಸ್ವಾಗತಿಸಿದ್ದಾರೆ.