ವಸಂತ ಪಂಚಮಿ ಹಿಂದೂಗಳ ಪವಿತ್ರ ದಿನ: ಶಿವಾನಂದ ತಿಪ್ಪಾ
Vasant Panchami is a holy day for Hindus: Shivanand Tippa
ಮಹಾಲಿಂಗಪುರ 24: ಇಂದು ಹಿಂದೂಗಳಿಗೆ ಪವಿತ್ರವಾದ ವಸಂತ ಪಂಚಮಿ ಆ ನಿಮಿತ್ಯ ನಮ್ಮ ಶಾಲೆಯಲ್ಲಿ ಸರಸ್ವತಿ ಮಂದಿರದಲ್ಲಿ ಪಂಚ ಲೋಹದ ಸರಸ್ವತಿ ವಿಗ್ರಹ ಪ್ರತಿಷ್ಠಾಪನೆ ಮಾಡಲಾಗುತ್ತಿದೆ ಎಂದು ಸಂಸ್ಥೆಯ ಉಪಾಧ್ಯಕ್ಷ ಶಿವಾನಂದ ತಿಪ್ಪಾ ಹೇಳಿದರು. ಸ್ಥಳೀಯ ಜೆಸಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನೆರವೇರಿದ ಸರಸ್ವತಿ ಮೂರ್ತಿ ಪ್ರತಿಷ್ಠಾಪನ ಸಂದರ್ಭದಲ್ಲಿ ಮಾತನಾಡಿದ ಅವರು ಇಂದು ಸರಸ್ವತಿ ಮಾತೆ ಅವತರಿಸಿದ ದಿನ, ಸರಸ್ವತಿ ಮಾತೆಯ ಕೃಪೆಯಿಂದ ಸರ್ವರೂ ಜ್ಞಾನ ಸಂಪಾದಿಸಬಹುದು. ಹಣ, ಅಂತಸ್ತು, ಐಶ್ವರ್ಯ ಮುಂತಾದ ಎಲ್ಲಾ ಸಂಪತ್ತುಗಳಿಗಿಂತ ಜ್ಞಾನ ಸಂಪತ್ತು ಶ್ರೇಷ್ಠ ಆ ಜ್ಞಾನವನ್ನು ಸಂಪಾದಿಸಲು ಸರ್ವರು ಸರಸ್ವತಿ ಮಾತೆಯ ಕೃಪೆಗೆ ಪಾತ್ರರಾಗಲು ಈ ದಿನ ಸುಸಂದರ್ಭ ಎಂದರು. ಪತ್ರಕರ್ತರಾದ ಎಸ್.ಎಸ್. ಈಶ್ವರ್ಪಗೋಳ, ನಾರನಗೌಡ ಉತ್ತಂಗಿ, ಮುಖ್ಯೋಪಾಧ್ಯಾಯ ಎಸ್.ಜಿ.ಕೌಜಲಗಿ, ಶಿಕ್ಷಕರಾದ ಸುರೇಶ ಮಾಟಗಾರ, ಎನ್.ಎಂ.ನಾಡಗೌಡ, ಐ.ಎಂ.ಬಡಿಗೇರ ಮತ್ತು ಮಕ್ಕಳ ಸಮ್ಮುಖದಲ್ಲಿ ಪ್ರತಿಷ್ಠಾಪಿಸಲಾಯಿತು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 