ಸಡಗರ ಸಂಭ್ರಮದಿಂದ ವಾಸವಿ ದೇವಿ ಗಂಗೆಸ್ಥಳ ಮೆರವಣಿಗೆ
Vasavi Devi Gangesthala procession with great enthusiasm
ಲೋಕದರ್ಶನ ವರದಿ
ಕಂಪ್ಲಿ 26: ಸಮೀಪದ ಚಿಕ್ಕಜಂತಕಲ್ ಗ್ರಾಮದಲ್ಲಿ ಆರ್ಯ ವೈಶ್ಯ ಸಮಾಜ ಬಾಂಧವರು ಅರಾಧ್ಯ ದೇವತೆ ಶ್ರೀ ವಾಸವಿ ಜಯಂತ್ಯೋತ್ಸವ ಪ್ರಯುಕ್ತ ದೇವಿಯ ಗಂಗೆಸ್ಥಳ ಹಾಗೂ ಉತ್ಸವ ಮೆರವಣಿಗೆ ಶ್ರದ್ಧಾ-ಭಕ್ತಿ, ಸಂಭ್ರಮ ಹಾಗೂ ಸಡಗರದಿಂದ ಭಾನುವಾರ ಜರುಗಿತು. ಇಲ್ಲಿನ ತುಂಗಭದ್ರ ನದಿ ತಟದಲ್ಲಿ ಗಂಗೆಪೂಜೆ ಶ್ರದ್ದೆಯಿಂದ ನೆರವೇರಿಸಿದ ನಂತರ ಆರಂಭಗೊಂಡ ಗಂಗೆಸ್ಥಳ ಮೆರವಣಿಗೆ ಗ್ರಾಮದ ಪ್ರಮುಖ ರಸ್ತೆಗಳ ಮೂಲಕ ಗ್ರಾಮ ದೇವತೆ ಶ್ರೀ ದ್ಯಾವಮ್ಮ ದೇವಸ್ಥಾನ, ಬಸವೇಶ್ವರ ದೇವಸ್ಥಾನದ ಮೂಲಕ ಸಂಚರಿಸಿ, ಕನ್ನಿಕಾ ಪರಮೇಶ್ವರಿ ದೇವಸ್ಥಾನದ ಸಮುದಾಯ ಭವನ ಬಳಿ ಸಂಪನ್ನಗೊಂಡಿತು.
ಈ ಮೆರವಣಿಗೆಯಲ್ಲಿ ಮಹಿಳೆಯರ ಕುಂಭ, ಕಳಸ, ತಾಷಾರಾಂಡೋಲ್, ಮಂಗಳವಾದ್ಯ ಸೇರಿ ವಿವಿಧ ಕಲಾ ಪ್ರಕಾರಗಳು ಮೆರಗು ನೀಡಿದವು. ನಂತರ ವಿಶೇಷ ಪೂಜೆ, ಪಂಚಾಮೃತ ಅಭಿಷೇಕ ಸೇರಿದಂತೆ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು. ನಂತರ ಪ್ರಸಾದದ ವ್ಯವಸ್ಥೆ ಕಲ್ಪಿಸಲಾಗಿತ್ತು. ಆರ್ಯವೈಶ್ಯ ಸಮಾಜದ ಗ್ರಾಮ ಘಟಕ ಅಧ್ಯಕ್ಷ ಪಾನಗಂಟಿ ರಾಮಮೂರ್ತಿ ಚಾಲನೆ ನೀಡಿ ಮಾತನಾಡಿ, ವಾಸವಿ ದೇವಿಯ ಆರಾಧನೆಯಿಂದ ಮಾನಸಿಕ ನೆಮ್ಮದಿ ಜತೆಗೆ ಜೀವನೋಲ್ಲಾಸಕ್ಕೆ ನಾಂದಿಯಾಗಲಿದೆ ಎಂದರು.
ನಂತರ ಯುವ ಮುಖಂಡ ಪಾನಗಂಟಿ ರಾಘವೇಂದ್ರ ಮಾತನಾಡಿ, ದೇವಿಯ ಆರಾಧನೆಯೇ ನಮ್ಮ ಬದುಕಿಗೆ ದಾರಿ ದೀಪ, ದೇವಿಯ ಆಶೀರ್ವಾದಿಂದ ಜೀವನ ಪಾವನವಾಗಿದೆ ಎಂದರು.ಈ ಸಂದರ್ಭದಲ್ಲಿ ಆರ್ಯವೈಶ್ಯ ಸಮಾಜದ ಉಪಾಧ್ಯಕ್ಷ ಸೌದ್ರಿ ನಾಗರಾಜ, ಮುಖಂಡರಾದ ಬದ್ರಿನಾಥ, ಸೌದ್ರಿ ಶ್ರೀನಿವಾಸ, ಸೌದ್ರಿ ಶೇಖರ್ಪ, ನವೀನ್ಚಂದ್ರ, ಅರುಣಾ ರಾಘವೇಂದ್ರ, ಅಶ್ವರ್ಯ ಸೌದ್ರಿ, ಸಂಗೀತ ಸೌದ್ರಿ, ಪದ್ಮಾ ಸೌದ್ರಿ, ಸುರೇಖಾ ಪಾನಗಂಟಿ, ಮಹಿಳೆಯರು, ಯುವಕರು, ಮಕ್ಕಳು ಪಾಲ್ಗೊಂಡಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 