ಮೌಲಾನಬಿಗೆ ವಾಸ್ತಲ್ಯ ಮನೆ ಹಸ್ತಾಂತರ

Vastalya house handed over to Maulana Bi

ಮೌಲಾನಬಿಗೆ ವಾಸ್ತಲ್ಯ ಮನೆ ಹಸ್ತಾಂತರ 

ದೇವರ ಹಿಪ್ಪರಗಿ 17: ಸ್ವಾಭಿಮಾನದಿಂದ ಬದುಕು ನಡೆಸಲು ಉದ್ಯೋಗ ಹಾಗೂ ನೆಲೆಸಲು ಒಂದು ಸೂರಿನ ಅಗತ್ಯತೆಯಿದೆ. ಈ ನಿಟ್ಟಿನಲ್ಲಿ ಮನೆ ಇಲ್ಲದ ಸಂಕಷ್ಟದಲ್ಲಿರುವವರನ್ನು ಆಯ್ಕೆ ಮಾಡಿ, ಅವರಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ವಾಸ್ತಲ್ಯ ಮನೆಗಳನ್ನು ನಿರ್ಮಿಸಿ ನೀಡಲಾಗುತ್ತಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕರಾದ ಸಂತೋಷಕುಮಾರ  ತಿಳಿಸಿದರು.ತಾಲ್ಲೂಕಿನ ಕೊಂಡಗೂಳಿ ಗ್ರಾಮದ ನಿವಾಸಿ ಶ್ರೀಮತಿ ಮೌಲಾನಬಿ ನದಾಫ್ ಅವರಿಗೆ ಮಾತೃಶ್ರೀ ಡಾ.ಹೇಮಾವತಿ ಹೆಗ್ಗಡೆ ಅವರ ಜ್ಞಾನವಿಕಾಸ ಕಾರ್ಯಕ್ರಮದಡಿ ನಿರ್ಮಿಸಿದ "ವಾಸ್ತಲ್ಯ ಮನೆ"ಯನ್ನು ಸೋಮವಾರದಂದು ಹಸ್ತಾಂತರಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಶಿವಾನಂದ ಹಾಗೂ ವೀರಗಂಟಿ ಅವರು ರಿಬ್ಬನ್ ಕಟ್ ಮಾಡುವ ಮೂಲಕ ಮನೆ ಹಸ್ತಾಂತರ ಮಾಡಲಾಯಿತು.ಇದೇ ಸಂದರ್ಭದಲ್ಲಿ ಜಿಲ್ಲಾ ರಿಕವರಿ ಯೋಜನಾಧಿಕಾರಿಗಳಾದ ಕೃಷ್ಣಮೂರ್ತಿ, ವಿಶ್ವನಾಥ್, ಮಾಜಿ ಗ್ರಾಮ ಪಂಚಾಯತಿ ಉಪಾಧ್ಯಕ್ಷರ ಪ್ರತಿನಿಧಿ ಸಂಗಮೇಶ ದಂಡೋತಿ ಸೇರಿದಂತೆ ಗ್ರಾಮದ ಪ್ರಮುಖರು, ಗಣ್ಯರು, ಸಂಘದ ವಲಯದ ಮೇಲ್ವಿಚಾರಕರು, ಸೇವಾ ಪ್ರತಿನಿಧಿಗಳು ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.ಫೋಟೋ 17ಡಿಎ