ಮೌಲಾನಬಿಗೆ ವಾಸ್ತಲ್ಯ ಮನೆ ಹಸ್ತಾಂತರ
Vastalya house handed over to MaulanaBi
ದೇವರಹಿಪ್ಪರಗಿ 18: ಸ್ವಾಭಿಮಾನದಿಂದ ಬದುಕು ನಡೆಸಲು ಉದ್ಯೋಗ ಹಾಗೂ ನೆಲೆಸಲು ಒಂದು ಸೂರಿನ ಅಗತ್ಯತೆಯಿದೆ. ಈ ನಿಟ್ಟಿನಲ್ಲಿ ಮನೆ ಇಲ್ಲದ ಸಂಕಷ್ಟದಲ್ಲಿರುವವರನ್ನು ಆಯ್ಕೆ ಮಾಡಿ, ಅವರಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ವಾಸ್ತಲ್ಯ ಮನೆಗಳನ್ನು ನಿರ್ಮಿಸಿ ನೀಡಲಾಗುತ್ತಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕ ಸಂತೋಷಕುಮಾರ ತಿಳಿಸಿದರು.
ತಾಲೂಕಿನ ಕೊಂಡಗೂಳಿ ಗ್ರಾಮದ ನಿವಾಸಿ ಮೌಲಾನಬಿ ನದಾಫ್ ಅವರಿಗೆ ಮಾತೃಶ್ರೀ ಡಾ.ಹೇಮಾವತಿ ಹೆಗ್ಗಡೆ ಅವರ ಜ್ಞಾನವಿಕಾಸ ಕಾರ್ಯಕ್ರಮದಡಿ ನಿರ್ಮಿಸಿದ ವಾಸ್ತಲ್ಯ ಮನೆಯನ್ನು ಸೋಮವಾರದಂದು ಹಸ್ತಾಂತರಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಶಿವಾನಂದ ಹಾಗೂ ವೀರಗಂಟಿ ಅವರು ರಿಬ್ಬನ್ ಕಟ್ ಮಾಡುವ ಮೂಲಕ ಮನೆ ಹಸ್ತಾಂತರ ಮಾಡಲಾಯಿತು.
ಜಿಲ್ಲಾ ರಿಕವರಿ ಯೋಜನಾಧಿಕಾರಿಗಳಾದ ಕೃಷ್ಣಮೂರ್ತಿ, ವಿಶ್ವನಾಥ್, ಮಾಜಿ ಗ್ರಾಮ ಪಂಚಾಯತಿ ಉಪಾಧ್ಯಕ್ಷರ ಪ್ರತಿನಿಧಿ ಸಂಗಮೇಶ ದಂಡೋತಿ ಸೇರಿದಂತೆ ಗ್ರಾಮದ ಪ್ರಮುಖರು, ಗಣ್ಯರು, ಸಂಘದ ವಲಯದ ಮೇಲ್ವಿಚಾರಕರು, ಸೇವಾ ಪ್ರತಿನಿಧಿಗಳು ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 