ಸ್ಪೀಕರ್ ಕಾಗೇರಿ ವಿರುದ್ಧ ವಾಟಾಳ್ ನಾಗರಾಜ್ ಕಿಡಿ
ಬೆಂಗಳೂರು, ಅ 15: ವಿಧಾನ ಮಂಡಲ ಅಧಿವೇಶನ ಕಲಾಪ ವರದಿಗಾರಿಕೆಯಿಂದ ಮಾಧ್ಯಮದವರನ್ನು ಹೊರಗಿಟ್ಟಿರುವ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಒಬ್ಬ ಅವಿವೇಕಿ ಎಂದು ವಾಟಾಳ್ ಪಕ್ಷದ ಅಧ್ಯಕ್ಷ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಟೀಕಿಸಿದ್ದಾರೆ. ಬಿಜೆಪಿ ಸರ್ಕಾರದ ನಡೆ ಹಾಗೂ ಸ್ಪೀಕರ್ ತೀರ್ಮಾನ ಖಂಡಿಸಿ ಹಾಗೂ ಔರಾದ್ ಕರ್ ವರದಿ ಜಾರಿಗೆ ಒತ್ತಾಯಿಸಿ ನಗರದಲ್ಲಿಂದು ವಾಟಾಳ್ ನಾಗರಾಜ್ ಅವರು ಪೊಲೀಸ್ ಪೇದೆ ಧಿರಿಸು ಧರಿಸಿ ಕೈಯಲ್ಲಿ ಕ್ಯಾಮೆರಾ ಹಿಡಿದು ಎಂದಿನಂತೆ ವಿಭಿನ್ನ ಶೈಲಿಯಲ್ಲಿ ತಮ್ಮ ಬೆಂಬಲಿಗರೊಂದಿಗೆ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಅವರು, ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ವಿಧಾನಸಭೆಯಿಂದ ಮಾಧ್ಯಮಗಳನ್ನು ದೂರ ಇಟ್ಟಿದ್ದು ಪ್ರಜಾಪ್ರಭುತ್ವ ವಿರೋಧಿ ನೀತಿ. ಮಾಧ್ಯಮದವರ ಹಕ್ಕನ್ನು ಕಸಿದುಕೊಳ್ಳುವ ಹಕ್ಕು ಮತ್ತು ಅಧಿಕಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗಾಗಲೀ ಸ್ಪೀಕರ್ ಗಾಗಲೀ ಇಲ್ಲ. ಈ ಕೂಡಲೇ ತೀರ್ಮಾನವನ್ನು ಯಡಿಯೂರಪ್ಪ ಹಾಗೂ ಸ್ಪೀಕರ್ ಹಿಂಪಡೆಯಬೇಕೆಂದು ಒತ್ತಾಯಿಸಿದರು ತೀರಾ ನಿಕೃಷ್ಟವಾಗಿ ಬದುಕುತ್ತಿರುವ ಪೊಲೀಸರ ವೇತನವನ್ನು ಸರ್ಕಾರ ಪರಿಷ್ಕರಿಸಿ ಔರಾದ್ಕರ್ ವರದಿಯನ್ನು ಕೂಡಲೇ ಜಾರಿಗೆ ತಂದು ಆ ಮೂಲಕ ಪೋಲೀಸರಿಗೆ ಅನುಕೂಲ ಮಾಡಿಕೊಡಬೇಕು. ಇಲ್ಲದಿದ್ದಲ್ಲಿ ಕನ್ನಡ ಪರ ಹೋರಾಟಗಾರರ ಮತ್ತು ಸಂಘಟನೆ ಗಳ ಬೆಂಬಲದಿಂದ ಕರ್ನಾಟಕ ಬಂದ್ ಗೆ ಕರೆ ನೀಡಬೇಕಾಗುತ್ತದೆ ಎಂದು ವಾಟಾಳ್ ನಾಗರಾಜ್ ಎಚ್ಚರಿಸಿದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 