ವಿಜೃಂಭಣೆಯಿಂದ ಜರುಗಿದ ವೀರಭದ್ರೇಶ್ವರ ರಥೋತ್ಸವ
Veerabhadreshwara chariot festival celebrated with grandeur
ಯರಗಟ್ಟಿ, 04 : ಉತ್ತರ ಕರ್ನಾಟಕದ ಧರ್ಮಸ್ಥಳದ ಎಂಬ ಖ್ಯಾತಿ ಹೊಂದಿರುವ ಗೊಡಚಿ ಕ್ಷೇತ್ರದ ಶ್ರೀ ವೀರಭದ್ರೇಶ್ವರ ರಥೋತ್ಸವವು ಹೊಸ್ತಿಲ ಹುಣ್ಣಿಮೆ ದಿನ ಗುರುವಾರ ಅತ್ಯಂತ ವಿಜೃಂಭಣೆಯಿಂದ ಜರುಗಿತು. ಪ್ರತಿ ಸಲದಂತೆ ಈ ಸಲವೂ ಗುರುವಾರ ಸಂಜೆ 5ಕ್ಕೆ ವೀರಭದ್ರೇಶ್ವರನ ರಥೋತ್ಸವ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ಜರುಗಿತು. ಈ ನಿಟ್ಟಿನಲ್ಲಿ ರಾತ್ರಿಯಿಂದಲೇ 11 ಜನ ಶಾಸ್ತ್ರಿಗಳಿಂದ ವೀರಭದ್ರ ದೇವರು, ಭದ್ರಕಾಳಿ ಮಾತೆಗೆ ಮಹಾಮಸ್ತಕಾಭಿಷೇಕ, ಸಹಸ್ರ ಬಿಲ್ವಾರ್ಚನೆ, ಅಮ್ಮನಿಗೆ ಕುಂಕುಮಾರ್ಚನೆ, ಮಹಾ ಮಂಗಳಾರತಿ ಕಾರ್ಯಕ್ರಮಗಳು ಜರುಗಿದವು.
ಕಲಿಯುಗದಲ್ಲಿಯೂ ನಂಬಿದ ಭಕ್ತರ ಇಷ್ಟಾರ್ಥಗಳನ್ನು ಈಡೇರಿಸಬಲ್ಲ ದೈವಾದಿ ಪುರಷನಾಗಿ ಪ್ರಸಿದ್ದಿ ಪಡೆದು ಭಕ್ತರ ಮನದಲ್ಲಿ ಮನೆ ಮಾಡಿರುವ ವೀರಭದ್ರನ ಜಾತ್ರೆ ಈ ಭಾಗದಲ್ಲಿಯೇ ಖ್ಯಾತಿ ಪಡೆದಿದೆ. ಗೊಡಚಿಯ ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ ನಿರಂತರ ಅನ್ನದಾಸೋಹ ನಡೆಸುತ್ತ ಉತ್ತರ ಕರ್ನಾಟಕದ ಧರ್ಮಸ್ಥಳ ಎಂಬ ಹೆಗ್ಗಳಿಕೆಗೆ ಈ ದೇವಸ್ಥಾನವು ಪಾತ್ರವಾಗಿದೆ.ಈ ವೇಳೆ ನಂದಿಕೋಲು, ವೀರಗಾಸೆ ಪುರವಂತರ ಕುಣಿತ, ಸಕಲವಾದ್ಯ ಗೋಷ್ಠಿಗಳೊಂದಿಗೆ ಜರುಗಿತು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 