ವಿಜೃಂಭಣೆಯಿಂದ ಜರುಗಿದ ವೀರಭದ್ರೇಶ್ವರ ರಥೋತ್ಸವ
Veerabhadreshwara chariot festival celebrated with grandeur
ಯರಗಟ್ಟಿ, 04 : ಉತ್ತರ ಕರ್ನಾಟಕದ ಧರ್ಮಸ್ಥಳದ ಎಂಬ ಖ್ಯಾತಿ ಹೊಂದಿರುವ ಗೊಡಚಿ ಕ್ಷೇತ್ರದ ಶ್ರೀ ವೀರಭದ್ರೇಶ್ವರ ರಥೋತ್ಸವವು ಹೊಸ್ತಿಲ ಹುಣ್ಣಿಮೆ ದಿನ ಗುರುವಾರ ಅತ್ಯಂತ ವಿಜೃಂಭಣೆಯಿಂದ ಜರುಗಿತು. ಪ್ರತಿ ಸಲದಂತೆ ಈ ಸಲವೂ ಗುರುವಾರ ಸಂಜೆ 5ಕ್ಕೆ ವೀರಭದ್ರೇಶ್ವರನ ರಥೋತ್ಸವ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ಜರುಗಿತು. ಈ ನಿಟ್ಟಿನಲ್ಲಿ ರಾತ್ರಿಯಿಂದಲೇ 11 ಜನ ಶಾಸ್ತ್ರಿಗಳಿಂದ ವೀರಭದ್ರ ದೇವರು, ಭದ್ರಕಾಳಿ ಮಾತೆಗೆ ಮಹಾಮಸ್ತಕಾಭಿಷೇಕ, ಸಹಸ್ರ ಬಿಲ್ವಾರ್ಚನೆ, ಅಮ್ಮನಿಗೆ ಕುಂಕುಮಾರ್ಚನೆ, ಮಹಾ ಮಂಗಳಾರತಿ ಕಾರ್ಯಕ್ರಮಗಳು ಜರುಗಿದವು.
ಕಲಿಯುಗದಲ್ಲಿಯೂ ನಂಬಿದ ಭಕ್ತರ ಇಷ್ಟಾರ್ಥಗಳನ್ನು ಈಡೇರಿಸಬಲ್ಲ ದೈವಾದಿ ಪುರಷನಾಗಿ ಪ್ರಸಿದ್ದಿ ಪಡೆದು ಭಕ್ತರ ಮನದಲ್ಲಿ ಮನೆ ಮಾಡಿರುವ ವೀರಭದ್ರನ ಜಾತ್ರೆ ಈ ಭಾಗದಲ್ಲಿಯೇ ಖ್ಯಾತಿ ಪಡೆದಿದೆ. ಗೊಡಚಿಯ ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ ನಿರಂತರ ಅನ್ನದಾಸೋಹ ನಡೆಸುತ್ತ ಉತ್ತರ ಕರ್ನಾಟಕದ ಧರ್ಮಸ್ಥಳ ಎಂಬ ಹೆಗ್ಗಳಿಕೆಗೆ ಈ ದೇವಸ್ಥಾನವು ಪಾತ್ರವಾಗಿದೆ.ಈ ವೇಳೆ ನಂದಿಕೋಲು, ವೀರಗಾಸೆ ಪುರವಂತರ ಕುಣಿತ, ಸಕಲವಾದ್ಯ ಗೋಷ್ಠಿಗಳೊಂದಿಗೆ ಜರುಗಿತು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 