ವೀರಶೈವ ಲಿಂಗಾಯತ ಒಂದೇ: ಕುಕನೂರ ಶ್ರೀ
Veerashaiva Lingayat is one: Kukanur Sri
ಕುಕನೂರ 17 : ವೀರಶೈವ ಲಿಂಗಾಯತರು ಬೇರೆ ಬೇರೆಯಲ್ಲ ಮುಂಬರುವ ಜಾತಿ ಸಮೀಕ್ಷೆಯಲ್ಲಿ ವೀರಶೈವ ಲಿಂಗಾಯತ ಧರ್ಮ ಎಂದು ಬರಿಸಬೇಕು ಎಂದು ಕುಕನೂರ ಪಟ್ಟಣದ ಅನ್ನದಾನೀಶ್ವರ ಶಾಖಾಮಠದ ಪೂಜ್ಯ ಮಹದೇವ ಸ್ವಾಮೀಜಿ ಹೇಳಿದರು.
ಅವರು ಕುಕನೂರ ಪಟ್ಟಣದ ಅನ್ನದಾನೀಶ್ಚರ ಮಠದಲ್ಲಿ ಮಾತನಾಡುತ್ತಾ ಈಗಾಗಲೇ ಮುಂಡರಗಿ ಶ್ರೀ ಜಗದ್ಗುರು ಅನ್ನದಾನೀಶ್ವರ ಸಂಸ್ಥಾನಮಠದ ಪೂಜ್ಯರು ಬಹಳ ಸ್ಪಷ್ಟವಾಗಿ ವೀರಶೈವ ಲಿಂಗಾಯತ ಧರ್ಮದ ಇತಿಹಾದ ತಿಳಿಸಿದ್ದಾರೆ ಅವರೋಂದಿಗೆ ಈ ನಾಡಿನ ಶಿರಹಟ್ಟಿ ಪೂಜ್ಯರು ಸೇರಿದಂತೆ ಹಲವಾರು ಪೂಜ್ಯರು ವೀರಶೈವ ಲಿಂಗಾಯತ ಒಂದೇ ಎಂಬ ಸಂದೇಶ ನೀಡಿದ್ದಾರೆ ಆದ್ದರಿಂದ ಸಮಾಜದ ಬಂಧುಗಳು ಯಾವುದಕ್ಕೂ ಕಿವಿ ಕೊಡದೆ ಸಮಾಜದ ಒಳತಿಗಾಗಿ ಹೊಂದಾಗಬೇಕು, ಹಾನಗಲ್ ಕುಮಾರಸ್ವಾಮಿಗಳು ಸ್ಥಾಪಿಸಿದ ವೀರಶೈವ ಲಿಂಗಾಯತ ಮಹಾಸಭಾ ನಿಲುವಿಗೆ ನಾವೇಲ್ಲ ಬದ್ದರಾಗಬೇಕು, ವೀರಶೈವರು ಬೇರೆ ಲಿಂಗಾಯತರು ಬೇರೆ ಎಂದರೆ ಸಮಾಜ ಅಭಿವೃದ್ಧಿ ಹೊಂದಲು ಸಾದ್ಯವಿಲ್ಲ, ಬಸವಣ್ಣನವರು ರೇಣಕರು ಸಮಾಜದ ಎರಡು ಕಣ್ಣುಗಳು ಯಾವುದೇ ಕಣ್ಣಿಗೆ ನೋವಾದರು ಅದು ನಮ್ಮ ಸಮಾಜಕ್ಕೆ ಹಾನಿಯಾಗುತ್ತದೆ, ನಮ್ಮಲ್ಲಿರುವ ಸಣ್ಣ ಪುಟ್ಟ ಬಿನ್ನಾಬಿಪ್ರಾಯಗಳನ್ನ ಮರೆತು ನಾವೇಲ್ಲ ಹೊಂದಾಗಬೇಕು, ಸಮಾಜ ಒಡೆಯುವ ಕಾರ್ಯಕ್ಕೆ ಯಾರು ಮುಂದಾಗಬಾರದು ಈ ನಿಟ್ಟಿನಲ್ಲಿ ದಿನಾಂಕ 19 ರಂದು ನಡೆಯುವ ವೀರಶೈವ ಲಿಂಗಾಯತ ಏಕತಾ ಸಮಾವೇಶಕ್ಕೆ ಸಮಾಜದ ಬಂಧುಗಳು ಬರಬೇಕು ಮತ್ತು ವೀರಶೈವ ಲಿಂಗಾಯತ ಒಂದೇ ಎಂಬ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.
ಅಂಬೋಲಿ ಬಳಿ ಕಣಿವೆಗೆ ಬಿದ್ದು ಯುವಕ ದುರ್ಮರಣ : 5 ಗಂಟೆ ಕಾರ್ಯಾಚರಣೆ ಬಳಿಕ ಶವ ಪತ್ತೆ
ಸುತಗಟ್ಟಿ ಗ್ರಾಮದಲ್ಲಿ ಪ್ರತ್ಯಕ್ಷವಾಗಿದ್ದ ಚಿರತೆ ಸೆರೆ : ನಿಟ್ಟೂಸಿರು ಬಿಟ್ಟ ಗ್ರಾಮಸ್ಥರು
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ 