ಏ.6 ರಂದು ವೀರವಿರಾಗಿಣಿ ಅಕ್ಕಮಹಾದೇವಿ ಜಯಂತಿ ಕಾರ್ಯಕ್ರಮ

ಏ.6 ರಂದು ವೀರವಿರಾಗಿಣಿ ಅಕ್ಕಮಹಾದೇವಿ ಜಯಂತಿ ಕಾರ್ಯಕ್ರಮ Veeraviragini Akkamahadevi Jayanti program on April 6th

ಬೆಳಗಾವಿ 03 :  ಶಿವಬಸವನಗರ ಕಾರಂಜಿಮಠದ ಶಿವಾನುಭವ ಮಂಟಪದಲ್ಲಿ 298ನೇ ಶಿವಾನುಭವ ಹಾಗೂ ವೀರ ವಿರಾಗಿಣಿ ಅಕ್ಕಮಹಾದೇವಿ ಜಯಂತಿ ಕಾರ್ಯಕ್ರಮವು ಸೋಮವಾರ 6 ಏಪ್ರಿಲ್ 2026ರಂದು ಸಾಯಂಕಾಲ 6 ಗಂಟೆಗೆ ಜರುಗುವುದು. ಕಾರ್ಯಕ್ರಮದ ಸಾನ್ನಿಧ್ಯವನ್ನು ಪೂಜ್ಯ ಮ.ನಿ.ಪ್ರ. ಗುರುಸಿದ್ಧ ಮಹಾಸ್ವಾಮಿಗಳು ವಹಿಸಲಿದ್ದು, ಅಖಿಲ ಭಾರತ ವೀರಶೈವ ಮಹಾಸಭೆ ಜಿಲ್ಲಾ ಘಟಕದ ಅಧ್ಯಕ್ಷರಾದ  ರತ್ನಪ್ರಭಾ ಬೆಲ್ಲದ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಶರಣೆ ಪ್ರೇಮಕ್ಕ ಅಂಗಡಿ ಅವರು ಆಗಮಿಸಿ “ಸಾರ್ಥಕ ಬದುಕಿಗೆ ಮಹಾದೇವಿಯಕ್ಕನ ಸಂದೇಶ" ಎಂಬ ವಿಷಯ ಕುರಿತು ವಿಶೇಷ ಉಪನ್ಯಾಸ ನೀಡುವರು. ಕಾರಂಜಿಮಠದ ಕುಮಾರೇಶ್ವರ ಸಂಗೀತ ಪಾಠಶಾಲೆಯ ಮಕ್ಕಳಿಂದ ಪ್ರಾರ್ಥನೆ ಜರುಗುವುದು ಎಂದು ಶ್ರೀಮಠದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.