ವೆಂಕಟೇಶ್ವರ ಸ್ವಾಮಿ ಕಲ್ಯಾಣ ಮಹೋತ್ಸವ
Venkateswara Swamy Kalyana Mahotsav
ಕಂಪ್ಲಿ 28: ಪಟ್ಟಣದ ಮುಖ್ಯ ರಸ್ತೆಯಲ್ಲಿರುವ ಶ್ರೀ ಲಕ್ಷ್ಮೀ ವೆಂಕಟೇಶ್ವರ ಸ್ವಾಮಿ (ಗುಡ್ಡದ ತಿಮ್ಮಪ್ಪ) ದೇವಸ್ಥಾನದಲ್ಲಿ ಶರನ್ನವರಾತ್ರಿ ಪ್ರಯುಕ್ತ 10 ದಿನಗಳ ಕಾಲ ಪ್ರತಿದಿನ ಸ್ವಾಮಿಗೆ ವಿವಿಧ ಉತ್ಸವಗಳನ್ನು ಆಯೋಜಿಸಿದ್ದು, ಶನಿವಾರ ಲಕ್ಷ್ಮೀ ವೆಂಕಟೇಶ್ವರ ಸ್ವಾಮಿಯ ಕಲ್ಯಾಣ ಮಹೋತ್ಸವ ಸಡಗರ ಸಂಭ್ರಮಗಳಿಂದ ಜರುಗಿತು.
ಪುರಾತನ ಲಕ್ಷ್ಮೀ ವೆಂಕಟೇಶ್ವರ ಸ್ವಾಮಿಯ ಶಿಲಾ ಮೂರ್ತಿಗೆ ವಿವಿಧ ಅಭಿಷೇಕ, ವಿಶೇಷ ಅಲಂಕಾರ ಮಾಡಿ ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು. ಉತ್ಸವ ಮೂರ್ತಿಗಳಾದ ಭೂದೇವಿ,ಶ್ರೀದೇವಿ ಸಹಿತ ವೆಂಟಕಟೇಶ್ವರ ಸ್ವಾಮಿಯ ಕಲ್ಯಾಣ ಮಹೋತ್ಸವವು ದೇವಸ್ಥಾನ ಆರ್ಚಕರು ಹಾಗೂ ದೇವಸ್ಥಾನ ಸಮಿತಿಯ ಪದಾಧಿಕಾರಿಗಳ ನೇತ್ರುತ್ವದಲ್ಲಿ ಸಂಭ್ರಮದಿಂದ ಜರುಗಿತು. ಮುರುಳಿ ಮತ್ತು ಅಚ್ಚುತ್ತಾ ದಂಪತಿಗಳು ಕಲ್ಯಾಣ ಮಹೋತ್ಸವ ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ಅರ್ಚಕ ಬೋಸಿ ಪಾಂಡುರಂಗಾಚಾರ್, ಮುಖಂಡರಾದ ಶ್ರೀಧರ್ ಶ್ರೇಷ್ಠಿ, ರಾಮಲಿಂಗಯ್ಯ, ಬಾಲವೆಂಕಟೇಶ, ದೇವಸ್ಥಾನದ ಅಧ್ಯಕ್ಷರು, ಪದಾಧಿಕಾರಿಗಳು, ಅರ್ಯವ್ಯೆಶ್ಯ ಸಮಾಜ, ಬ್ರಾಹ್ಮಣ ಸಮಾಜ ಸೇರಿದಂತೆ ವಿವಿಧ ಸಮಾಜಗಳ ಮುಖಂಡರು ಭಾಗವಹಿಸಿದ್ದರು. ಮಹಾಮಂಗಳಾರತಿನಂತರ ಪ್ರಸಾದ ವಿತರಣೆ ಜರುಗಿತು.
ಲಕ್ಷ್ಮೀವೆಂಕಟೇಶ್ವರ ಸ್ವಾಮಿಯ ಕಲ್ಯಾಣ ಮಹೋತ್ಸವದ ಅಂಗವಾಗಿ ಸಕಲ ಸದ್ಭಕ್ತರಿಗೆ ಅನ್ನಾಂತರೆ್ಣ ಜರುಗಿತು.ಭೂದೇವಿ, ಶ್ರೀದೇವಿ ಸಹಿತ ವೆಂಕಟೇಶ್ವರ ಸ್ವಾಮಿಯ ಅದ್ದೂರಿ ಮೆರವಣಿಗೆ ಪಟ್ಟಣದ ಪ್ರಮುಖ ಬೀದಿಯಲ್ಲಿ ಸಕಲ ಮಂಗಳವಾದ್ಯಗಳೊಂದಿಗೆ ಜರುಗಿತು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 