ರನ್ನ ಬೆಳಗಲಿ ಹಿರಿಯ ಭಜನಾ ಕಲಾವಿದ ಕಲಾವಿದ ವಿಧಿವಶ
Veteran bhajana artist, passes away
ರನ್ನ ಬೆಳಗಲಿ 18: ಪಟ್ಟಣದ 80 ವರ್ಷದ ಹಿರಿಯ ಬಯಲಾಟ ಮತ್ತು ಭಜನಾ ಕಲಾವಿದರಾದ ಶಿವಪುತ್ರ್ಪ ವೀರಭದ್ರ್ಪ ಕೊಣ್ಣೂರ ಅವರು ಗುರುವಾರ ದಂದು ವಯೋ ಸಹಜ ಮರಣ ಹೊಂದಿದ್ದಾರೆ.
ಇರ್ವ ಸುಪುತ್ರರು, ಸುಪುತ್ರಿ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.ಇವರಿಗೆ ಬೈಲಾಟ ಮತ್ತು ಭಜನೆ ಕ್ಷೇತ್ರದಲ್ಲಿ ಸೇವೆ ಪರಿಗಣಿಸಿ ತಾಲೂಕ, ಜಿಲ್ಲಾ ಮತ್ತು ರಾಜ್ಯ ಮಟ್ಟಗಳ ಅನೇಕ ಪ್ರಶಸ್ತಿ, ಪುರಸ್ಕಾರಗಳನ್ನು ನೀಡಿ ಗೌರವಿಸಲಾಗಿದೆ. ಬಾಗಲಕೋಟೆ ಜಿಲ್ಲೆಯ ಉಸ್ತುವಾರಿ ಸಚಿವರಾದ ಆರ್ ಬಿ ತಿಮ್ಮಾಪುರ, ಚಿತ್ರದುರ್ಗದ ಸಂಸದರಾದ ಗೋವಿಂದ ಕಾರಜೋಳ, ಬಾಗಲಕೋಟೆ ಜಿಲ್ಲೆಯ ಸಂಸದರಾದ ಪಿ ಸಿ ಗದ್ದೆಗೌಡರ, ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ಶಿವಾನಂದ ಶೆಲ್ಲಿಕೇರಿ, ತಾಲೂಕ ಅಧ್ಯಕ್ಷರಾದ ರಮೇಶ ಅರಿಕೇರಿ, ವಲಯ ಅಧ್ಯಕ್ಷರಾದ ರಾಘವೇಂದ್ರ ನೀಲನ್ನವರ ಹಾಗೂ ಕರ್ನಾಟಕ ಜಾನಪದ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಮತ್ತು ವಿವಿಧ ಕನ್ನಡ ಪರ ಸಂಘಟನೆಗಳು ಹಿರಿಯ ಕಲಾವಿದರಿಗೆ ಶ್ರದ್ಧಾಂಜಲಿಯನ್ನು ಕೋರಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 