ಅನುಭವಿ ನಾಯಕ ಸಲೀಂ ಅಹಮದ್ಗೆ ಸಚಿವ ಸ್ಥಾನ ನೀಡಲಿ
Veteran leader Saleem Ahmed should be given a ministerial post
ಲೋಕದರ್ಶನ ವರದಿ
ಮಹಾಲಿಂಗಪುರ 27: ಕಾಂಗ್ರೆಸ್ ಪಕ್ಷದ ಸಂಘಟನೆ ಹಾಗೂ ರಾಜ್ಯ ರಾಜಕಾರಣದಲ್ಲಿ ಹಲವು ವರ್ಷಗಳಿಂದ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರಸ್ತುತ ಕರ್ನಾಟಕ ವಿಧಾನ ಪರಿಷತ್ತಿನ ಸದಸ್ಯರಾಗಿ ಹಾಗೂ ವಿಧಾನ ಪರಿಷತ್ತಿನಲ್ಲಿ ಸರ್ಕಾರದ ಮುಖ್ಯ ಸಚೇತಕರಾಗಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕದ ಹಿರಿಯ ರಾಜಕಾರಣಿ ಹಾಗೂ ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕ ಸಲೀಂ ಅಹಮದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸೂರಜ್ ಅವಟಿ ಆಗ್ರಹಿಸಿದ್ದಾರೆ.
ಸಲೀಂ ಅಹಮದ್ ಅವರು ವಿದ್ಯಾರ್ಥಿ ದೆಸೆಯಿಂದಲೇ ರಾಜಕೀಯ ಪ್ರವೇಶಿಸಿ, ಪಕ್ಷದ ಸಂಘಟನೆಗೆ ತಳಮಟ್ಟದಿಂದ ದುಡಿದು, ವಿದ್ಯಾರ್ಥಿ ಸಂಘಟನೆ, ಯುವ ಕಾಂಗ್ರೆಸ್, ಕೆಪಿಸಿಸಿ ಹಾಗೂ ಸರ್ಕಾರದ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿರುವ ಸಲೀಂ ಅಹಮದ್ ಅವರಂತಹ ಅನುಭವಿ ನಾಯಕರಿಗೆ ಸಚಿವ ಸ್ಥಾನ ನೀಡುವುದು ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೂ ಗೌರವ ನೀಡಿದಂತಾಗುತ್ತದೆ. ಅವರ ರಾಜಕೀಯ ಅನುಭವ, ಸಂಘಟನಾ ಸಾಮರ್ಥ್ಯ ಹಾಗೂ ಆಡಳಿತಾತ್ಮಕ ಜ್ಞಾನವನ್ನು ಪರಿಗಣಿಸಿ ಮುಂಬರುವ ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆಯ ಸಂದರ್ಭದಲ್ಲಿ ಸಲೀಂ ಅಹಮದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸೂರಜ್ ಅವಟಿ ಒತ್ತಾಯಿಸಿದ್ದಾರೆ.
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ 