ಪಶು ಸೇವೆಯೇ ಸಮಾಜ ಸೇವೆ: ಡಾ. ನಾಗರಾಜ
ಗದಗ 03: ಜನರು ಪಶುಗಳ ಆರೋಗ್ಯ ಸೇವೆಯನ್ನು ಮಾಡುವುದು ಸಮಾಜ ಸೇವೆಯನ್ನು ಮಾಡಿದಂತೆ ಎಂದು ಪಶುವೈದ್ಯಕೀಯ ಮಹಾವಿದ್ಯಾಲಯದ ಡೀನ್ರವರಾದ ಡಾ. ಆರ್. ನಾಗರಾಜ ತಿಳಿಸಿದರು.
ದಿ. 23ರಿಂದ 29ರವರೆಗೆ ಪಶುವೈದ್ಯಕೀಯ ಮಹಾವಿದ್ಯಾಲಯ, ಗದಗ ರಾಷ್ಟ್ರೀಯ ಸೇವಾ ಯೋಜನೆ (ಎನ್.ಎಸ್.ಎಸ್) ಘಟಕದ ವತಿಯಿಂದ ಸ್ವಚ್ಛ ಗ್ರಾಮ ಆರೋಗ್ಯಕರ ಗ್ರಾಮ ಎಂಬ ಧ್ಯೇಯದಡಿಯಲ್ಲಿ ಗದಗ ತಾಲ್ಲೂಕಿನ ಸಂಭಾಪೂರ ಗ್ರಾಮದಲ್ಲಿ ಆಯೋಜಿಸಿದ್ದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಏಳು ದಿನಗಳ ವಾಷರ್ಿಕ ವಿಶೇಷ ಶಿಬಿರದ ಕಾರ್ಯಕ್ರಮದಲ್ಲಿ ಪಶು ಆರೋಗ್ಯ ಶಿಬಿರ, ವೈದ್ಯಕೀಯ ಶಿಬಿರ, ಗ್ರಾಮ ಸ್ವಚ್ಛತಾ, ರೈತರ ಜೊತೆಗೆ ಸಂವಾದ ಮತ್ತು ಸಸಿನೆಡುವ ಕಾರ್ಯಕ್ರಮದ ಜೊತೆಗೆ ಪ್ರತಿ ದಿನ ಸಂಜೆ 6-30 ಕ್ಕೆ ಮಹಾವಿದ್ಯಾಲಯದ ಉಪನ್ಯಾಸಕರಿಂದ ಉಪನ್ಯಾಸ ಮತ್ತು ಶಿಬಿರಾರ್ಥಿಗಳಿಂದ ಸಾಂಸ್ಕೃತಿಕ ಚಟುವಟಿಕೆಗಳು ಜರುಗಿದವು.
ಮಹಾವಿದ್ಯಾಲಯದ ಸಹಾಯಕ ಪ್ರಾದ್ಯಾಪಕರಾದ ಡಾ. ಶಿವಕುಮಾರ ಕೆ. ರೆಡ್ಡರ್., ಕೃಷಿ ಇಲಾಖೆಯ ನಿವೃತ್ತ ಅಧಿಕಾರಿ ಡಾ. ಕೆ. ಬಿ ನಾಗನೂರು., ನಿವೃತ್ತ ಆರ್.ಟಿ.ಓ ಅಧಿಕಾರಿ ಎ. ಪಿ. ಕುರಹಟ್ಟಿ, ಆರೋಗ್ಯ ಇಲಾಖೆಯ ನಿವೃತ್ತ ಅಧಿಕಾರಿ ಸುಭಾಷ್ ದೇವರೆಡ್ಡಿ ಬೆಳ್ಳಿಕೊಪ್ಪ ಹಾಗೂ ಪಶುವೈದ್ಯಕೀಯ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಸಂಯೋಜಕರಾದ ಡಾ. ಸತೀಶ. ಚಂದ್ರ. ಬಿರಾದಾರ್, ವಿದ್ಯಾರ್ಥಿ -ವಿದ್ಯಾರ್ಥಿನಿಯರು ಮತ್ತು ಗ್ರಾಮಸ್ಥರು ಇದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 