ದ್ವೀಪ ಹಚ್ಚಿನ ಬಳಿಕ ಅಲ್ಪಸಂಖ್ಯಾತರ ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿದ ದುಷ್ಕರ್ಮಿಗಳು
ಮಂಗಳೂರು, ಏ.6, ಕೊರೋನ ವೈರಸ್ ವಿರುದ್ಧದ ಹೋರಾಟದಲ್ಲಿ ಒಗ್ಗಟ್ಟು ಪ್ರದರ್ಶಿಸಲು ಪ್ರಧಾನಿ ನರೇಂದ್ರ ಮೋದಿಯವರು ಕರೆ ನೀಡಿದ್ದ ದ್ವೀಪ ಹಚ್ಚುವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಗುಂಪೊಂದು ಅಲ್ಪಸಂಖ್ಯಾತರ ಮನೆಗಳಿಗೆ ಕಲ್ಲು ತೂರಾಟ ನಡೆಸಿರುವ ಘಟನೆ ಕಳೆದ ರಾತ್ರಿ ಬಂಟ್ವಾಳ ತಾಲೂಕಿನ ಕಡೇಶಿವಾಲಯದ ಪೆರ್ಲಪು ಪ್ರತಾಪ್ನಗರದಲ್ಲಿ ನಡೆದಿದೆ.ಕೊರೋನಾ ವಿರುದ್ಧದ ಹೋರಾಟದಲ್ಲಿ ಐಕ್ಯತೆ ಪ್ರದರ್ಶಿಸಲು ಏಪ್ರಿಲ್ 5ರಂದು ರಾತ್ರಿ 9 ಗಂಟೆಯಿಂದ 9 ನಿಮಿಷಗಳ ಕಾಲ ದೇಶದ ಜನರು ದ್ವೀಪ ಹಚ್ಚುವಂತೆ ಪ್ರಧಾನಿ ಮನವಿ ಮಾಡಿದ್ದರು. ದೀಪ ಹಚ್ಚುವ ಅಭಿಯಾನದ ಬಳಿಕ ಗುಂಪೊಂದು ಅಲ್ಪಸಂಖ್ಯಾತರ ಮನೆಗಳಿರುವ ಕಾಲೊನಿಗೆ ಆಗಮಿಸಿ ಸಿಡಿಮದ್ದೊಂದನ್ನು ಎಸೆದಿದ್ದರು. ಆ ಬಳಿಕ ರಾತ್ರಿ 11 ಗಂಟೆಯ ಸುಮಾರಿಗೆ ಹಲವು ಮನೆಗಳಿಗೆ ಕಲ್ಲು ತೂರಾಟ ನಡೆಸಲಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಈ ಬಗ್ಗೆ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದು ಅದರಂತೆ ಸ್ಥಳಕ್ಕೆ ಬಂದ ಬಂಟ್ವಾಳ ಗ್ರಾಮಾಂತರ ಠಾಣೆಯ ಪೊಲೀಸರು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು 