ಗೆಲುವಿನ ಆಶಾಭಾವನೆಯಿಂದ ಆಟವಾಡಿದಲ್ಲಿ ಗೆಲುವು ಸಾಧ್ಯ: ಕಸಾಳೆ
Victory is possible if you play with the hope of winning: Kasale
ನೇಸರಗಿ 09: ಕ್ರೀಡಾ ಸ್ಪರ್ಧಿಗಳು ಗೆಲುವಿನ ಆಶಾಭಾವನೆಯಿಂದ ಆಟವಾಡಿದಲ್ಲಿ ಗೆಲುವು ಸಾಧ್ಯ ಎಂದು ಪ್ರಭಾರಿ ಸಮನ್ವಯ ಅಧಿಕಾರಿ ಬಿ.ಎನ್. ಕಸಾಳೆ ಹೇಳಿದರು.
ಸಮೀಪದ ವಣ್ಣೂರ ಶಾಂತಿನಿಕೇತನ ಶಾಲೆಯಲ್ಲಿ ಪ್ರಾಥಮಿಕ ಶಾಲೆಗಳ ಹಣಬರಹಟ್ಟಿ ಕ್ಲಸ್ಟರದ ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳಿಗೆ ಕ್ರೀಡೆಯಲ್ಲಿ ಪಾಲ್ಗೊಳ್ಳುವದರಿಂದ ದೈಹಿಕ, ಮಾನಸಿಕ, ಶಾರೀರಿಕವಾಗಿ ಬಲಾಡ್ಯಗೊಳ್ಳಲು ಅನುಕೂಲವಾಗುತ್ತದೆ ಎಂದರು.
ಯೋಗ ಗುರು ಸಂಗಮೇಶ ಸವದತ್ತಿಮಠ ಮಾತನಾಡಿ, ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ದೈಹಿಕ ಆರೋಗ್ಯ ಮುಖ್ಯವಾಗಿದೆ. ಕ್ರೀಡೆಯಲ್ಲಿ ಪಾಲ್ಗೊಳ್ಳುವುದರಿಂದ ವಿದ್ಯಾರ್ಥಿಗಳು ಗಟ್ಟಿಗೊಳ್ಳುವರು ಎಂದರು.
ಶಾಂತಿನಿಕೇತನ ಸಂಸ್ಥೆ ಅಧ್ಯಕ್ಷ ಸುರೇಶ ಗಂಗಣ್ಣವರ, ಸಿಆರ್ಪಿಗಳಾದ ಎಸ್.ಬಿ.ಸಂಗನಗೌಡರ, ರಾಜು ಹಕ್ಕಿ, ಮಹೇಶ ಯರಗಟ್ಟಿ, ಎಚ್.ಡಿ.ಕಿಲ್ಲೇದಾರ, ಹಣಮಂತ ದೊಡ್ಡನ್ನವರ, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಎಸ್.ಐ.ಮಿರ್ಜನ್ನವರ, ಮುಖ್ಯೋಪಾಧ್ಯಾಯ ವಿ.ಬಿ.ಕರಲಿಂಗನ್ನವರ, ಜ್ಯೂಲಿಯಟ್ ಪರ್ನಾಂಡಿಸ್, ಶಿಕ್ಷಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 