ಗೆಲುವಿನ ಆಶಾಭಾವನೆಯಿಂದ ಆಟವಾಡಿದಲ್ಲಿ ಗೆಲುವು ಸಾಧ್ಯ: ಕಸಾಳೆ
Victory is possible if you play with the hope of winning: Kasale
ನೇಸರಗಿ 09: ಕ್ರೀಡಾ ಸ್ಪರ್ಧಿಗಳು ಗೆಲುವಿನ ಆಶಾಭಾವನೆಯಿಂದ ಆಟವಾಡಿದಲ್ಲಿ ಗೆಲುವು ಸಾಧ್ಯ ಎಂದು ಪ್ರಭಾರಿ ಸಮನ್ವಯ ಅಧಿಕಾರಿ ಬಿ.ಎನ್. ಕಸಾಳೆ ಹೇಳಿದರು.
ಸಮೀಪದ ವಣ್ಣೂರ ಶಾಂತಿನಿಕೇತನ ಶಾಲೆಯಲ್ಲಿ ಪ್ರಾಥಮಿಕ ಶಾಲೆಗಳ ಹಣಬರಹಟ್ಟಿ ಕ್ಲಸ್ಟರದ ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳಿಗೆ ಕ್ರೀಡೆಯಲ್ಲಿ ಪಾಲ್ಗೊಳ್ಳುವದರಿಂದ ದೈಹಿಕ, ಮಾನಸಿಕ, ಶಾರೀರಿಕವಾಗಿ ಬಲಾಡ್ಯಗೊಳ್ಳಲು ಅನುಕೂಲವಾಗುತ್ತದೆ ಎಂದರು.
ಯೋಗ ಗುರು ಸಂಗಮೇಶ ಸವದತ್ತಿಮಠ ಮಾತನಾಡಿ, ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ದೈಹಿಕ ಆರೋಗ್ಯ ಮುಖ್ಯವಾಗಿದೆ. ಕ್ರೀಡೆಯಲ್ಲಿ ಪಾಲ್ಗೊಳ್ಳುವುದರಿಂದ ವಿದ್ಯಾರ್ಥಿಗಳು ಗಟ್ಟಿಗೊಳ್ಳುವರು ಎಂದರು.
ಶಾಂತಿನಿಕೇತನ ಸಂಸ್ಥೆ ಅಧ್ಯಕ್ಷ ಸುರೇಶ ಗಂಗಣ್ಣವರ, ಸಿಆರ್ಪಿಗಳಾದ ಎಸ್.ಬಿ.ಸಂಗನಗೌಡರ, ರಾಜು ಹಕ್ಕಿ, ಮಹೇಶ ಯರಗಟ್ಟಿ, ಎಚ್.ಡಿ.ಕಿಲ್ಲೇದಾರ, ಹಣಮಂತ ದೊಡ್ಡನ್ನವರ, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಎಸ್.ಐ.ಮಿರ್ಜನ್ನವರ, ಮುಖ್ಯೋಪಾಧ್ಯಾಯ ವಿ.ಬಿ.ಕರಲಿಂಗನ್ನವರ, ಜ್ಯೂಲಿಯಟ್ ಪರ್ನಾಂಡಿಸ್, ಶಿಕ್ಷಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 