ರೈತ ಸಂಘಕ್ಕೆ ಯಾದಗಿರಿ ಜಿಲ್ಲಾಧ್ಯಕ್ಷರಾಗಿ ವಿಜಯ್ ಭರತ್
Vijay Bharath appointed as Yadgir district president of the Farmers' Association
ಬಳ್ಳಾರಿ 16: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಯಾದಗಿರಿ ಜಿಲ್ಲೆಗೆ ಅಧ್ಯಕ್ಷರಾಗಿ ವಿಜಯ್ ಭರತ್ ಅವರನ್ನು ನೇಮಕ ಮಾಡಲಾಗಿದೆ.ವಿಜಯ್ ಭರತ್ ಕಳೆದ ಹಲವಾರು ವರ್ಷಗಳಿಂದ ರೈತ ಪರವಾಗಿ ಧ್ವನಿ ಎತ್ತುತ್ತಿದ್ದು ರೈತರ ಸಮಸ್ಯೆಗಳಿಗೆ ಮಿಡಿಯುವ ಹೃದಯವಂತರಾಗಿದ್ದಾರೆ.
ಕಳಪೆ ಬೀಜ, ಗೊಬ್ಬರದಿಂದ ರೈತರು ಅನುಭವಿಸುತ್ತಿರುವ ನಷ್ಟ, ಅತಿ ವೃಷ್ಟಿ ಹಾಗೂ ಅನಾವೃಷ್ಟಿಯಿಂದಾಗಿ ಪದೇ ಪದೇ ಸಂಕಷ್ಟಕ್ಕೆ ಒಳಗಾಗುವ ರೈತರ ನೆರವಿಗೆ ಸರ್ಕಾರದ ಗಮನ ಸೆಳೆಯುವಲ್ಲಿ ಮಹತ್ತರ ಪಾತ್ರ ವಹಿಸುತ್ತಿದ್ದಾರೆ. ತೊಗರಿ ಬೆಳೆ, ಕಬ್ಬು, ಸೇಂಗಾ ಇತ್ಯಾದಿ ಬೆಳೆಗಳ ಬೆಲೆಯನ್ನು ಸರ್ಕಾರ ಸೂಕ್ತ ರೀತಿಯಲ್ಲಿ ನಿಗದಿಗೊಳಿಸಬೇಕು. ರೈತರು ಬೆಳೆದ ಆಹಾರ ಮತ್ತು ವಾಣಿಜ್ಯ ಫಸಲಿಗೆ ಸೂಕ್ತ ಬೆಂಬಲ ಬೆಲೆ ನಿಗದಿಪಡಿಸುವುದೂ ಸೇರಿದಂತೆ ಹಲವಾರು ರೀತಿಯ ಹೋರಾಟಗಳನ್ನು ಹಮ್ಮಿಕೊಳ್ಳಲು ಉದ್ದೇಶಸಿಸಿದ್ದಾರೆ. ಇವರ ರೈತ ಪರ ಕಾಳಜಿಯನ್ನು ಗಮನಿಸಿ ವಿಜಯ್ ಭರತ್ ಅವರಿಗೆ ಯಾದಗಿರಿ ಜಿಲ್ಲಾಧ್ಯಕ್ಷರನ್ನಾಗಿ ನಿಯೋಜಿಸಲಾಗಿದೆ ಎಂದು ಸೇನೆಯ ಅಧ್ವರ್ಯುಗಳು ತಿಳಿಸಿದ್ದಾರೆ. ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನಲ್ಲಿ ವಿಶ್ವ ರೈತ ಚೇತನ ರೈತ ಸೇನಾನಿ, ಹಸಿರು ಶಾಲಿನ ಹರಿಕಾರ ಪ್ರೊ. ಎಂ ಡಿ ನಂಜುಂಡಸ್ವಾಮಿಯವರ 90 ನೇ ವರ್ಷದ ಜನುಮ ದಿನ ಅಂಗವಾಗಿ ವರುಣ ಮತ ಕ್ಷೇತ್ರದ ತಾಂಡವಪುರ ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಜಯ್ ಭರತ್ ಅವರಿಗೆ ಈ ಜವಾಬ್ದಾರಿ ನೀಡಲಾಯಿತು.
ಈ ಸಂದರ್ಭದಲ್ಲಿ ರೈತ ಧುರೀಣರಾದ ಚೂನಪ್ಪ ಪೂಜೇರಿ ರಾಜ್ಯಾಧ್ಯಕ್ಷರು, ಮಹೇಶಗೌಡ ಎಂ ಸುಬೇದಾರ ಸಗರ ರಾಜ್ಯ ಕಾರ್ಯಾಧ್ಯಕ್ಷರು, ಶಿವಾನಂದ ಮುಗಳಿಹಾಳ ರಾಜ್ಯ ಉಪಾಧ್ಯಕ್ಷರು, ವಿದ್ಯಾಸಾಗರ ರಾಮೇಗೌಡ ಇಮ್ಮಾವು ರಾಜ್ಯ ಉಪಾಧ್ಯಕ್ಷರು, ಶರಣಪ್ಪ ಮರಳಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಸೇರಿದಂತೆ ಇನ್ನಿತರ ರಾಜ್ಯ, ವಿವಿಧ ಜಿಲ್ಲೆ ಹಾಗೂ ವಿವಿಧ ತಾಲೂಕಿನ ಪದಾಧಿಕಾರಿಗಳು ಇದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 