ರೈತ ಸಂಘಕ್ಕೆ ಯಾದಗಿರಿ ಜಿಲ್ಲಾಧ್ಯಕ್ಷರಾಗಿ ವಿಜಯ್ ಭರತ್
Vijay Bharath appointed as Yadgir district president of the Farmers' Association
ಬಳ್ಳಾರಿ 16: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಯಾದಗಿರಿ ಜಿಲ್ಲೆಗೆ ಅಧ್ಯಕ್ಷರಾಗಿ ವಿಜಯ್ ಭರತ್ ಅವರನ್ನು ನೇಮಕ ಮಾಡಲಾಗಿದೆ.ವಿಜಯ್ ಭರತ್ ಕಳೆದ ಹಲವಾರು ವರ್ಷಗಳಿಂದ ರೈತ ಪರವಾಗಿ ಧ್ವನಿ ಎತ್ತುತ್ತಿದ್ದು ರೈತರ ಸಮಸ್ಯೆಗಳಿಗೆ ಮಿಡಿಯುವ ಹೃದಯವಂತರಾಗಿದ್ದಾರೆ.
ಕಳಪೆ ಬೀಜ, ಗೊಬ್ಬರದಿಂದ ರೈತರು ಅನುಭವಿಸುತ್ತಿರುವ ನಷ್ಟ, ಅತಿ ವೃಷ್ಟಿ ಹಾಗೂ ಅನಾವೃಷ್ಟಿಯಿಂದಾಗಿ ಪದೇ ಪದೇ ಸಂಕಷ್ಟಕ್ಕೆ ಒಳಗಾಗುವ ರೈತರ ನೆರವಿಗೆ ಸರ್ಕಾರದ ಗಮನ ಸೆಳೆಯುವಲ್ಲಿ ಮಹತ್ತರ ಪಾತ್ರ ವಹಿಸುತ್ತಿದ್ದಾರೆ. ತೊಗರಿ ಬೆಳೆ, ಕಬ್ಬು, ಸೇಂಗಾ ಇತ್ಯಾದಿ ಬೆಳೆಗಳ ಬೆಲೆಯನ್ನು ಸರ್ಕಾರ ಸೂಕ್ತ ರೀತಿಯಲ್ಲಿ ನಿಗದಿಗೊಳಿಸಬೇಕು. ರೈತರು ಬೆಳೆದ ಆಹಾರ ಮತ್ತು ವಾಣಿಜ್ಯ ಫಸಲಿಗೆ ಸೂಕ್ತ ಬೆಂಬಲ ಬೆಲೆ ನಿಗದಿಪಡಿಸುವುದೂ ಸೇರಿದಂತೆ ಹಲವಾರು ರೀತಿಯ ಹೋರಾಟಗಳನ್ನು ಹಮ್ಮಿಕೊಳ್ಳಲು ಉದ್ದೇಶಸಿಸಿದ್ದಾರೆ. ಇವರ ರೈತ ಪರ ಕಾಳಜಿಯನ್ನು ಗಮನಿಸಿ ವಿಜಯ್ ಭರತ್ ಅವರಿಗೆ ಯಾದಗಿರಿ ಜಿಲ್ಲಾಧ್ಯಕ್ಷರನ್ನಾಗಿ ನಿಯೋಜಿಸಲಾಗಿದೆ ಎಂದು ಸೇನೆಯ ಅಧ್ವರ್ಯುಗಳು ತಿಳಿಸಿದ್ದಾರೆ. ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನಲ್ಲಿ ವಿಶ್ವ ರೈತ ಚೇತನ ರೈತ ಸೇನಾನಿ, ಹಸಿರು ಶಾಲಿನ ಹರಿಕಾರ ಪ್ರೊ. ಎಂ ಡಿ ನಂಜುಂಡಸ್ವಾಮಿಯವರ 90 ನೇ ವರ್ಷದ ಜನುಮ ದಿನ ಅಂಗವಾಗಿ ವರುಣ ಮತ ಕ್ಷೇತ್ರದ ತಾಂಡವಪುರ ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಜಯ್ ಭರತ್ ಅವರಿಗೆ ಈ ಜವಾಬ್ದಾರಿ ನೀಡಲಾಯಿತು.
ಈ ಸಂದರ್ಭದಲ್ಲಿ ರೈತ ಧುರೀಣರಾದ ಚೂನಪ್ಪ ಪೂಜೇರಿ ರಾಜ್ಯಾಧ್ಯಕ್ಷರು, ಮಹೇಶಗೌಡ ಎಂ ಸುಬೇದಾರ ಸಗರ ರಾಜ್ಯ ಕಾರ್ಯಾಧ್ಯಕ್ಷರು, ಶಿವಾನಂದ ಮುಗಳಿಹಾಳ ರಾಜ್ಯ ಉಪಾಧ್ಯಕ್ಷರು, ವಿದ್ಯಾಸಾಗರ ರಾಮೇಗೌಡ ಇಮ್ಮಾವು ರಾಜ್ಯ ಉಪಾಧ್ಯಕ್ಷರು, ಶರಣಪ್ಪ ಮರಳಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಸೇರಿದಂತೆ ಇನ್ನಿತರ ರಾಜ್ಯ, ವಿವಿಧ ಜಿಲ್ಲೆ ಹಾಗೂ ವಿವಿಧ ತಾಲೂಕಿನ ಪದಾಧಿಕಾರಿಗಳು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 