ವಿಜಯಪುರ: ಬಿ.ಎಲ್.ಡಿ.ಇ.ಗೆ ಅಪೋಲೋ ಆಸ್ಪತ್ರೆಯಿಂದ ಪ್ರಸಂಶೆ
ಲೋಕದರ್ಶನ ವರದಿ
ವಿಜಯಪುರ 10: ಜೆರಿಯಾಟ್ರಿಕ್ (ವೃದ್ದಾಪ್ಯ) ರಾಷ್ಟ್ರೀಯ ಸಮಾವೇಶವು ಇಂದ್ರಪ್ರಸ್ಥ ಅಪೋಲೋ ಆಸ್ಪತ್ರೆ ಮತ್ತು ಜೆರಿಯಾಟ್ರಿಕ್ ಸಂಸ್ಥೆಯ ಸಹಯೋಗದೊಂದಿಗೆ ಇತ್ತೀಚೆಗೆ ನವದೆಹಲಿಯಲ್ಲಿ ಆಯೋಜಿಸಲಾಗಿತ್ತು.
ಈ ರಾಷ್ಟ್ರೀಯ ಸಮಾವೇಶದಲ್ಲಿ ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯದ ಜೆರಿಯಾಟ್ರಿಕ್ ಕ್ಲಿನಿಕ್ 2018ರ ವರ್ಷದಲ್ಲಿ ಆಯೋಜಿಸಿದ ಜಾಗೃತಿ ಕಾರ್ಯಕ್ರಮಗಳು, ಉಚಿತ ಆರೋಗ್ಯ ಶಿಬಿರಗಳು, ಲಸಿಕಾ ಕಾರ್ಯಕ್ರಮಗಳು ಹಾಗೂ ಮುಂತಾದ ಹಿರಿಯರ ಆರೋಗ್ಯಕ್ಕೆ ಸಂಬಂಧಿಸಿದ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.
ದೆಹಲಿ ಸಂತೋಷ ವಿವಿ ಉಪಕುಲಪತಿ ಡಾ. ವಿ. ಕೆ.ಅರೋರಾ ಪ್ರಶಸ್ತಿಯನ್ನು ಬಿ.ಎಲ್.ಡಿ.ಇ ಜೆರಿಯಾಟ್ರಿಕ್ ಕ್ಲಿನಿಕ್ನ ಡಾ.ಆನಂದ ಪಿ.ಅಂಬಲಿ ಅವರಿಗೆ ವಿತರಿಸಿದರು. ಅಪೋಲೋ ಆಸ್ಪತ್ರೆಯ ಆಡಳಿತ ಮಂಡಳಿ ಸದಸ್ಯರು, ಜೆರಿಯಾಟ್ರಿಕ್ ಸೊಸೈಟಿ ಆಫ್ ಇಂಡಿಯಾ ಅಧ್ಯಕ್ಷ ಡಾ.ವಿವೇಕ ಹಂಡಾ, ಕಾರ್ಯದರ್ಶಿ ಡಾ.ಒ.ಪಿ.ಶರ್ಮಾ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್
ದ್ವಿಚಕ್ರವಾಹನ ಕಳ್ಳರ ಬಂಧನ : 6.10 ಲಕ್ಷ ಮೌಲ್ಯದ 14 ವಾಹನಗಳ ವಶಕ್ಕೆ ಎಸ್ ಪಿ ರಾಮರಾಜನ್
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ 