ವಿಜಯಪುರ: ಸಮಾಜದ ಅಭಿವೃದ್ಧಿಗೆ ಪತ್ರಿಕೋದ್ಯಮ ಪೂರಕ ಅಧ್ಯಕ್ಷ ಬಿ.ವಿ. ನಾಗರಾಜು ಸಲಹೆ
ಲೋಕದರ್ಶನ ವರದಿ
ವಿಜಯಪುರ 11: ಪತ್ರಿಕೋದ್ಯಮ ಎನ್ನುವುದು ಒಂದು ಚೌಕಟ್ಟಿನಲ್ಲಿರದೇ ಬೇರೆ ಬೇರೆ ವಿಷಯಗಳನ್ನು ಕೆಲ ಹಾಕಿದರೆ ಅದು ಸಮಾಜದ ಅಭಿವೃದ್ಧಿಗೆ ಪೂರಕವಾಗುತ್ತದೆ ಎಂದು ಕೆನಡಾದ ಇಂಡಿಯಾ ಆಬ್ಸ್ರ್ವರ್ ಪತ್ರಿಕೆಯ ಸಂಪಾದಕ ಮತ್ತು ಬಿ.ವಿ.ನಾಗ್ ಕಮ್ಯೂನಿಕೇಷನ್ಸ್ನ ಅಧ್ಯಕ್ಷ ಬಿ.ವಿ. ನಾಗರಾಜು ವಿದ್ಯಾರ್ಥಿನಿಯರಿಗೆ ಸಲಹೆ ನೀಡಿದರು.
ಪ್ರತಿಯೊಂದರಲ್ಲಿ ಆಸಕ್ತಿ ತೋರಿಸಿದರೆ ವಿಷಯದ ಬಗ್ಗೆ ಹೆಚ್ಚು ಮಾಹಿತಿ ದೊರೆಯುತ್ತದೆ. ಆ ಮಾಹಿತಿಯು ಸಮಾಜದ ಬದಲಾವಣೆಗೆ ಸಹಾಯಕವಾಗುತ್ತದೆ ಎಂದು ತಿಳಿಸಿದರು ಇಂದು ತಂತ್ರಜ್ಞಾನ ಅತೀ ವೇಗದಲ್ಲಿ ಬೆಳವಣಿಗೆ ಆಗುತ್ತಿದೆ. ಅದರ ಜೊತೆ ಜೊತೆಯಲ್ಲಿಯೇ ನೀವು ಬೆಳವಣಿಗೆಯಾಗಬೇಕು. ಇದರಿಂದ ನಿಮ್ಮ ವ್ಯಕ್ತಿತ್ವವೂ ವೃದ್ಧಿಸುತ್ತದೆ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಕೆನಡಾದ ಸಂವಹನ ತಜ್ಞೆ ಗೀತಾ ನಾಗರಾಜು ಹಾಗೂ ಅಧ್ಯಕ್ಷತೆ ವಹಿಸಿದ್ದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಪ್ರೊ.ಓಂಕಾರ ಕಾಕಡೆ ಮಾತನಾಡಿದರು.
ಕಾರ್ಯಕ್ರಮದಲ್ಲಿ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ.ತಹಮೀನಾ ಕೋಲಾರ ಮತ್ತು ಸಂದೀಪ ನಾಯಕ, ಬೋಧಕ-ಬೋಧಕೇತರ ಸಿಬ್ಬಂದಿ ವರ್ಗದವರು, ಸಂಶೋಧನಾ ಮತ್ತು ಸ್ನಾತಕೋತ್ತರ ವಿದ್ಯಾಥರ್ಿನಿಯರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಅಂತರರಾಷ್ಟ್ರೀಯ ಭೌತಶಾಸ್ತ್ರ ಒಲಿಂಪಿಯಾಡ್ 2026ರಲ್ಲಿ ಚಿನ್ನದ ಪದಕಗಳ ಸಾಧನೆ ಮಾಡಿದ ಭಾರತೀಯ ತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ
ಶಾಸಕರ ಆಮಿಷ ಆರೋಪದ ಕಾನೂನು ನೋಟಿಸ್ ಬಳಿಕ ಬಿಜೆಪಿ ನ್ಯಾಯಾಲಯದ ಮೂಲಕ ರಾಜಕೀಯ ಹೋರಾಟ ನಡೆಸುತ್ತಿದೆ ಎಂದು ಒಮರ್ ಅಬ್ದುಲ್ಲಾ ಆರೋಪ
ಮಧುರೈ ಸಮೀಪ ಓಮ್ನಿ ಬಸ್–ಟಿಎನ್ಎಸ್ಟಿಸಿ ಬಸ್ ಮುಖಾಮುಖಿ ಡಿಕ್ಕಿ: ಐವರು ಸಾವು, 42 ಮಂದಿಗೆ ಗಾಯ
ಆರೋಪಿತ ರೌಡಿ ಶೀಟರ್ ಜನ್ಮದಿನಾಚರಣೆಯಲ್ಲಿ ಬಿಜೆಪಿ ಶಾಸಕ ಎಸ್.ಆರ್. ವಿಶ್ವನಾಥ್ ಭಾಗಿ; ಕರ್ನಾಟಕದಲ್ಲಿ ರಾಜಕೀಯ ವಿವಾದ
ಮಾಹಿತಿ ಹಕ್ಕು ಕಾಯ್ದೆ ದುರ್ಬಲಕ್ಕೆ ಯತ್ನ: ಆಯುಕ್ತರ ವಿರುದ್ಧ ಕ್ರಮಕೈಗೊಳ್ಳದಿದ್ದರೆ ಕಾನೂನು ಹೋರಾಟ, ಗಾಡಾದ ಎಚ್ಚರಿಕೆ
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ 