ವಿಜಯಪುರ: ಸೃಜನಶೀಲತೆಯ ಸದುಪಯೋಗ ಪಡೆದುಕೊಳ್ಳಿ: ಡಿವೈಎಸ್ಪಿ ಗಜಾಕೋಶ ಹೇಳಿಕೆ
ಲೋಕದರ್ಶನ ವರದಿ
ವಿಜಯಪುರ 14: ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ ಇದ್ದು, ಇದರ ಸದುಪಯೋಗವಾಗಬೇಕು. ಪ್ರತಿಯೊಂದು ಹಂತದಲ್ಲಿ ಸೃಜನಾತ್ಮಕತೆ ಬೆಳೆಸಿಕೊಂಡು ಮುಂದೆ ಬರಬೇಕು ಉತ್ತಮ ಸಮಾಜಮುಖಿ ಬದುಕು ರೂಪಿಸಿಕೊಳ್ಳಬೇಕು ಎಂದು ಇಂಟಲಿಜನ್ಸ್ ವಿಭಾಗದ ಡಿವೈಎಸ್ಪಿ ಪಿ ಡಿ ಗಜಾಕೋಶ ಹೇಳಿದರು.
ನಗರದ ಸಿಕ್ಯಾಬ ಶಿಕ್ಷಣ ಸಂಸ್ಥೆಯ ಎಂ ಬಿ ಎ ವಿಭಾಗದ ವತಿಯಿಂದ ಹಮ್ಮಿಕೊಳ್ಳಲಾದ ಆಹಾರಮೇಳ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾಥರ್ಿಗಳು ಕಲಿಕೆಯ ಜೊತೆಗೆ ಕ್ರೀಯಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ನಮ್ಮಲ್ಲಿ ಉತ್ತಮ ವಿಚಾರಧಾರೆಗಳು ಮೂಡುತ್ತವೆ, ಹೊಸ ಹೊಸ ವಿಚಾರಗಳು ನಮ್ಮಲ್ಲಿ ಬಂದು ಜೀವನಮಾರ್ಗಕ್ಕೆ ಸಹಕಾರಿಯಾಗುತ್ತವೆ. ಈ ನಿಟ್ಟಿನಲ್ಲಿ ಸೃಜನಶೀಲತೆಗೆ ಪೂರಕವೆಂಬಂತೆ ಆಹಾರಮೇಳ ಹಮ್ಮಿಕೊಂಡಿರುವ ಕಾರ್ಯ ಶ್ಲಾಘನೀಯವಾಗಿದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಎಸ್ ಎ ಪುಣೇಕರ ಮಾತನಾಡಿ, ಕಲಿಕೆ ಜೊತೆಗೆ ನಮ್ಮ ಕಾಲೇಜಿನ ವಿದ್ಯಾಥರ್ಿಗಳು ಆಹಾರಮೇಳ ಹಮ್ಮಿಕೊಂಡು ಮಾದರಿಯಾಗಿದ್ದಾರೆ. ಜೀವನಮಾರ್ಗ ರೂಪಿಸಿಕೊಳ್ಳಲು ಸಹಕಾರಿಯಾಗಲಿದೆ ಎಂದರು.
ಕಾರ್ಯಕ್ರಮದಲ್ಲಿ ನಿವೃತ್ತ ಸೇನಾಧಿಕಾರಿಗಳಾದ ಮಲ್ಲಪ್ಪ ತೋಟದ, ಜೆ ಡಿ ಗುಲಬಾಬಿ, ಸಂಸ್ಥೆಯ ಕಾರ್ಯದಶರ್ಿ ಎ ಎಸ್ ಪಾಟೀಲ, ನಿದರ್ೇಶಕರಾದ ಸಲಾವುದ್ದೀನ ಪುಣೇಕರ, ಅಜರುದ್ದೀನ ಸಗರ, ಸಂದೀಪ ಪಾಟೀಲ, ಪರವೇಜ ರೋಜಿನದಾರ, ಅಂಝಲ,ಅರೆಲ್ಲಾ,ಅಶ್ವಿನಿ, ಈಸ್ಮಾಯಿಲ ಸೋಹೆಲ್ ಸೇರಿದಂತೆ ಕಾಲೇಜಿನ ವಿದ್ಯಾರ್ಥಿಗಳು ಕಾಲೇಜಿನ ಸಿಬ್ಬಂದಿ ಸಾರ್ವಜನಿಕರು ಪಾಲ್ಗೊಂಡಿದ್ದರು.
ಅಂತರರಾಷ್ಟ್ರೀಯ ಭೌತಶಾಸ್ತ್ರ ಒಲಿಂಪಿಯಾಡ್ 2026ರಲ್ಲಿ ಚಿನ್ನದ ಪದಕಗಳ ಸಾಧನೆ ಮಾಡಿದ ಭಾರತೀಯ ತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ
ಶಾಸಕರ ಆಮಿಷ ಆರೋಪದ ಕಾನೂನು ನೋಟಿಸ್ ಬಳಿಕ ಬಿಜೆಪಿ ನ್ಯಾಯಾಲಯದ ಮೂಲಕ ರಾಜಕೀಯ ಹೋರಾಟ ನಡೆಸುತ್ತಿದೆ ಎಂದು ಒಮರ್ ಅಬ್ದುಲ್ಲಾ ಆರೋಪ
ಮಧುರೈ ಸಮೀಪ ಓಮ್ನಿ ಬಸ್–ಟಿಎನ್ಎಸ್ಟಿಸಿ ಬಸ್ ಮುಖಾಮುಖಿ ಡಿಕ್ಕಿ: ಐವರು ಸಾವು, 42 ಮಂದಿಗೆ ಗಾಯ
ಆರೋಪಿತ ರೌಡಿ ಶೀಟರ್ ಜನ್ಮದಿನಾಚರಣೆಯಲ್ಲಿ ಬಿಜೆಪಿ ಶಾಸಕ ಎಸ್.ಆರ್. ವಿಶ್ವನಾಥ್ ಭಾಗಿ; ಕರ್ನಾಟಕದಲ್ಲಿ ರಾಜಕೀಯ ವಿವಾದ
ಮಾಹಿತಿ ಹಕ್ಕು ಕಾಯ್ದೆ ದುರ್ಬಲಕ್ಕೆ ಯತ್ನ: ಆಯುಕ್ತರ ವಿರುದ್ಧ ಕ್ರಮಕೈಗೊಳ್ಳದಿದ್ದರೆ ಕಾನೂನು ಹೋರಾಟ, ಗಾಡಾದ ಎಚ್ಚರಿಕೆ
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ 