ವಿಜಯಪುರ: ಸೆ.20 ರಿಂದ ಲಿಂ.ಸಿದ್ಧಲಿಂಗರ ಪುಣ್ಯಾರಾಧನೆ
ವಿಜಯಪುರ 13: ಇಂಡಿ ತಾಲ್ಲೂಕಿನ ಸುಕ್ಷೇತ್ರ ಲಚ್ಯಾಣ ಗ್ರಾಮದಲ್ಲಿ ಲಿಂಗೈಕ್ಯ ಸಿದ್ಧಲಿಂಗ ಮಹಾರಾಜರ 92ನೇ ಪುಣ್ಯಾರಾಧನೆಯ ಅಂಗವಾಗಿ ಇದೇ ದಿ. 20 ಹಾಗೂ 21 ರಂದು ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾಯ್ಕ್ರಮಗಳನ್ನು ಆಯೋಜಿಸಲಾಗಿದೆ.
ದಿ.20 ರಂದು ಬೆಳಿಗ್ಗೆ 5 ಕ್ಕೆ ಶಂಕರಲಿಂಗ ಮಹಾಶಿವಯೋಗಿಗಳ ಹಾಗೂ ಶ್ರೀ ಸಿದ್ಧಲಿಂಗ ಮಹಾರಾಜರ ಶಿಲಾ ಮೂರ್ತಿಗೆ ಅಭಿಷೇಕ, ವಿಶೇಷ ಪೂಜೆ ನೆರವೇರಲಿದೆ. ಸಂಜೆ 5 ಗಂಟೆಗೆ ಪ್ರವಚನಕಾರರಾದ ಪ್ರಭುಲಿಂಗ ಶರಣರು ಕಳೆದ ಸೆ.6 ರಿಂದ ನಡೆಸಿಕೊಂಡು ಬಂದ "ಪ್ರವಚನದ ಮಹಾಮಂಗಲೋತ್ಸವ" ನಡೆಯಲಿದೆ. ಬಳಿಕ ಸಂಜೆ 7 ಗಂಟೆಗೆ ನಾಡಿನ ವಿವಿಧ ಭಾಗಗಳಿಂದ ಆಗಮಿಸಿದ ಭಜನಾ ತಂಡದವರಿಂದ "ನಿರಂತರ ಸಪ್ತಾಹ ಭಜನೆ" ನಡೆಯಲಿದೆ. ದಿ.21 ರಂದು ಬೆಳಿಗ್ಗೆ 11 ಕ್ಕೆ ಬಂಥನಾಳ ಹಾಗೂ ಲಚ್ಯಾಣ ಮಠದ ಪೀಠಾಧೀಶರಾದ ಪೂಜ್ಯ ಶ್ರೀ ವೃಷಭಲಿಂಗ ಮಹಾಶಿವಯೋಗಿಗಳ ಪಾದ ಪೂಜಾ ಸಮಾರಂಭ ಜರುಗಲಿದೆ. ಸೋಲಾಪುರದ ಬಸವರಾಜ ಸಿದ್ರಾಮಪ್ಪ ಕರಜಗಿಕರ್ ದಂಪತಿಗಳು ಈ ಸೇವೆ ನೆರವೇರಿಸಲಿದ್ದಾರೆ. ಸಂಜೆ 5 ಗಂಟೆಗೆ ಬಂಥನಾಳದ ಸಂಗನಬಸವ ಮಹಾಶಿವಯೋಗಿಗಳ ಭಾವಚಿತ್ರದೊಂದಿಗೆ ಅಡ್ಡ ಪಲ್ಲಕ್ಕಿ ಮೆರವಣಿಗೆಯು ಗ್ರಾಮದ ಪ್ರಮುಖ ಬೀದಿಗಳಲ್ಲಿ ವೈಭವದಿಂದ ನಡೆಯಲಿದೆ.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 