ವಿಜಯಪುರ: 'ರಸಗೊಬ್ಬರ ಬಳಕೆಯಿಂದ ಭೂಮಿಯ ಸಾಮಥ್ರ್ಯ ಹೆಚ್ಚಿಸಿ'
ಲೋಕದರ್ಶನ ವರದಿ
ವಿಜಯಪುರ 22: ಕೃಷಿ ವಿಜ್ಞಾನ ಕೇಂದ್ರ, ಕೋರಮಂಡಲ ಇಂಟರನ್ಯಾಷನಲ್ ಲಿಮಿಟೆಡ್, ಸಹಯೋಗದೊಂದಿಗೆ "ರಸಗೊಬ್ಬರ ಬಳಕೆ ಮತ್ತು ಜಾಗೃತಿ" ಕುರಿತು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಕೃಷಿ ಮಹಾವಿದ್ಯಾಲಯ, ಡೀನ್ ಡಾ.ಎಸ್.ಬಿ.ಕಲಘಟಗಿ ಉದ್ಘಾಟಿಸಿ ಮಾತನಾಡುತ್ತಾ ಕೃಷಿಯಲ್ಲಿ ಪೋಷಕಾಂಶಗಳ ಮಹತ್ವ ಭೂಮಿಯ ಸಾಮಥ್ರ್ಯವನ್ನು ರಸಗೊಬ್ಬರಗಳ ಬಳಕೆಯ ಮೂಲಕ ಹೆಚ್ಚಿಸಿ ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನಗಳನ್ನು ಬಳಸಿಕೊಂಡು 2022 ರ ವೇಳೆಗೆ ರೈತರ ಆದಾಯ ದ್ವಿಗುಣಗೊಳಿಸಲು ಶ್ರಮಿಸಬೇಕೆಂದು ರೈತರಿಗೆ ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಹ ವಿಸ್ತರಣಾ ನಿದರ್ೆಶಕ ಡಾ.ಬೆಳ್ಳಿ ಮಾತನಾಡುತ್ತಾ, ರೈತರು ರಸಗೊಬ್ಬರಗಳ ಬಳಕೆಯ ಬಗ್ಗೆ ಅರಿವು ಮಾಡಿಕೊಂಡು ಅದರ ಜೊತೆಗೆ ಕೊಟ್ಟಿಗೆ ಗೊಬ್ಬರ, ಹಸಿರೆಲೆಗೊಬ್ಬರ, ಜೈವಿಕಗೊಬ್ಬರವನ್ನು ಸಮರ್ಪಕವಾಗಿ ಬಳಕೆ ಮಾಡಿದರೆ ಕೃಷಿಯಲ್ಲಿ ಹೆಚ್ಚಿನ ಆದಾಯ ಪಡೆಯಬಹುದು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥ ಡಾ.ಬಿರಾದಾರ, ಸ್ವಾಗತಿಸಿದರು, ರಾಠೋಡ ನಿರೂಪಿಸಿದರು. ಡಾ.ವಿವೇಕ ದೇವರನಾವದಗಿ ವಂದಿಸಿದರು. ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ ಡಾ.ಪ್ರೇಮಾ. ಬಿ.ಪಾಟೀಲ, ಡಾ.ಸಂಗೀತಾ ಜಾಧವ, ಡಾ.ಶಿವಲಿಂಗಪ್ಪ ಹೋಟಕರ, ಮಲ್ಲಪ್ಪ. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಸುಮಾರು 60 ಜನ ರೈತಬಾಂದವರು ಭಾಗವಹಿಸಿ ತರಬೇತಿಯ ಲಾಭ ಪಡೆದುಕೊಂಡರು.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 