ವಿಜಯಪುರ: ಅನಾಮಧೇಯ ಗಂಡುಮಗು ರಕ್ಷಣೆ
ಲೋಕದರ್ಶನ ವರದಿ
ವಿಜಯಪುರ 11: ಸಿಂದಗಿ ತಾಲೂಕಿನ ತೋಟದ ವಸ್ತಿಯಲ್ಲಿ ಪತ್ತೆಯಾಗಿದ್ದ ಅನಾಮಧೇಯ ಗಂಡು ಮಗುವನ್ನು ರಕ್ಷಿಸಿ ಮಕ್ಕಳ ಸಹಾಯವಾಣಿ ತಂಡ ವಿಜಯಪುರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದೆ.
ಕಳೆದ ದಿ.7 ರಂದು ಸಾಯಂಕಾಲ ಈ ಮಗು ತೋಟದವಸ್ತಿಯಲ್ಲಿ ಪತ್ತೆಯಾಗಿತ್ತು, ಈ ಮಗುವನ್ನು ಗಮನಿಸಿದ ಸಾರ್ವಜನಿಕರೊಬ್ಬರು ತಮ್ಮ ಮನೆಯಲ್ಲಿ ತಂದು ಸಾಕಿರುವ ಬಗ್ಗೆ ಮಕ್ಕಳ ಸಹಾಯವಾಣಿಗೆ ಮಕ್ಕಳ ಸಹಾಯವಾಣಿ ತಂಡಕ್ಕೆ ಮಂಗಳವಾರ ಸಾಯಂಕಾಲ ದೂರವಾಣಿ ಮೂಲಕ ಮಾಹಿತಿ ಬಂದಿತ್ತು. ತಕ್ಷಣವೇ ಮಕ್ಕಳ ಸಹಾಯವಾಣಿ ಸಂಯೋಜಕಿ ಸುನಂದಾ ತೋಳಬಂದಿ ನೇತೃತ್ವದ ಮೂರು ಜನರ ತಂಡ ಸಿಂದಗಿ ಪೊಲೀಸ್ ಸಿಬ್ಬಂದಿಯೊಂದಿಗೆ ಮಗು ಇದ್ದ ಸ್ಥಳಕ್ಕೆ ತೆರಳಿ ಮಗುವನ್ನು ರಕ್ಷಿಸಿ ವಿಜಯಪುರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದೆ. ಮಗು ಆರೋಗ್ಯವಾಗಿದೆ.
ಈ ರಕ್ಷಣಾ ಕಾರ್ಯಾಚರಣೆಯಲ್ಲಿ ಮಕ್ಕಳ ಸಹಾಯವಾಣಿ ತಂಡದ ಸದಸ್ಯರಾದ ಶಶಿಕಲಾ ಜಾಬೇನವರ, ಸುವಣರ್ಾ ವಾಲಿಕಾರ, ಪೊಲೀಸ್ ಸಿಬ್ಬಂದಿ ಆರ್.ಬಿ. ಕಗ್ಗೋಡ ಅವರು ಭಾಗವಹಿಸಿದ್ದರು.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 