ವಿಜಯಪುರ: ಬಿಜೆಪಿ ನೂತನ ಅಧ್ಯಕ್ಷರಾಗಿ ಆರ್.ಎಸ್.ಪಾಟೀಲ
ವಿಜಯಪುರ 13: ಜಿಲ್ಲಾ ಭಾರತೀಯ ಜನತಾ ಪಕ್ಷದ ನೂತನ ಅಧ್ಯಕ್ಷರಾಗಿ ಆರ್.ಎಸ್. ಪಾಟೀಲ (ಕೂಚಬಾಳ) ಅಧಿಕಾರ ಸ್ವೀಕರಿಸಿದರು.
ವಿಜಯಪುರದ ಗುರುದತ್ತ ಮಂಗಲ ಕಾರ್ಯಾಲಯದಲ್ಲಿ ಜರುಗಿದ ಪದಗ್ರಹಣ ಸಮಾರಂಭದಲ್ಲಿ ನಿಕಟಪೂರ್ವ ಅಧ್ಯಕ್ಷ ಚಂದ್ರಶೇಖರ ಕವಟಗಿ ಅವರು ನೂತನ ಜಿಲ್ಲಾಧ್ಯಕ್ಷ ಆರ್.ಎಸ್. ಪಾಟೀಲ ಅವರಿಗೆ ಪಕ್ಷದ ಬಾವುಟ ನೀಡಿ ಅಧಿಕಾರ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಪಕ್ಷದ ರಾಜ್ಯ ಚುನಾವಣೆ ಸಹ ಉಸ್ತುವಾರಿ ಹಾಗೂ ಶಾಸಕ ಹಾಲಪ್ಪ ಆಚಾರ್ಯ, ಸಂಸದ ರಮೇಶ ಜಿಗಜಿಣಗಿ, ಶಾಸಕ ಸೋಮನಗೌಡ ಪಾಟೀಲ (ಸಾಸನೂರ), ಪಕ್ಷದ ಜಿಲ್ಲಾ ಚುನಾವಣೆ ಉಸ್ತುವಾರಿ ಅಮರನಾಥ ಪಾಟೀಲ, ಮಾಜಿ ಸಚಿವರಾದ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ಎಸ್.ಕೆ. ಬೆಳ್ಳುಬ್ಬಿ, ಡಾ.ಗೋಪಾಲ ಕಾರಜೋಳ, ದಯಾಸಾಗರ ಪಾಟೀಲ, ಸಿದ್ಧಲಿಂಗ ಹಂಜಗಿ, ಪ್ರಕಾಶ ಅಕ್ಕಲಕೊಟ, ವಿಜುಗೌಡ ಪಾಟೀಲ, ರವಿಕಾಂತ ಬಗಲಿ, ಸಂಗರಾಜ ದೇಸಾಯಿ, ವಿವೇಕಾನಂದ ಡಬ್ಬಿ ಹಾಗೂ ಪಕ್ಷದ ಎಲ್ಲ ಮಂಡಲಗಳ ಅಧ್ಯಕ್ಷರುಗಳು ಉಪಸ್ಥಿತರಿದ್ದರು.
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್
ದ್ವಿಚಕ್ರವಾಹನ ಕಳ್ಳರ ಬಂಧನ : 6.10 ಲಕ್ಷ ಮೌಲ್ಯದ 14 ವಾಹನಗಳ ವಶಕ್ಕೆ ಎಸ್ ಪಿ ರಾಮರಾಜನ್
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ 