ವಿಜಯಪುರ: ಭೀಮರಾವ ಅಂಬೇಡ್ಕರಗೆ ಸನ್ಮಾನ
ಲೋಕದರ್ಶನ ವರದಿ
ವಿಜಯಪುರ 22: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ ಅವರ ಮೊಮ್ಮಗ ಹಾಗೂ ಭಾರತೀಯ ಭೌದ್ಧ ಮಹಾಸಭಾದ ರಾಷ್ಟ್ರೀಯ ಕಾರ್ಯಾಧ್ಯಕ್ಷ ಭೀಮರಾವ ಅಂಬೇಡ್ಕರ ಶುಕ್ರವಾರ ವಿಜಯಪುರಕ್ಕೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ಅವರನ್ನು ವಿಜಯಪುರ ಜಿಲ್ಲಾ ಎಸ್.ಸಿ./ಎಸ್.ಟಿ. ನೌಕರರ ಸಮನ್ವಯ ಸಮಿತಿಯಿಂದ ಆತ್ಮಿಯವಾಗಿ ಸನ್ಮಾನಿಸಲಾಯಿತು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಭೀಮರಾವ ಅಂಬೇಡ್ಕರ ಅವರು, ಸಂವಿಧಾನ ಬಗ್ಗೆ ಈ ರಾಜ್ಯದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಸಂವಿಧಾನದ ಬಗ್ಗೆ ಹಗುರವಾಗಿ ಮಾತನಾಡುವುದು ಸರಿಯಲ್ಲ. ಸಂವಿಧಾನದ ರಕ್ಷಣೆ ಮಾಡುವುದು ಎಲ್ಲರ ಹೊಣೆಗಾರಿಕೆ ಆಗಿದೆ. ವಿಶೆಷವಾಗಿ ನೌಕರರು ಒಗ್ಗಟ್ಟಿನಿಂದ ಇರಬೇಕು. ಸಮಾಜದ ಉನ್ನತಿಗಾಗಿ ದುಡಿಯಬೇಕು ಎಂದು ಹೇಳಿದರು.
ಸಮಿತಿ ಅಧ್ಯಕ್ಷ ಬಿ.ಎಚ್. ನಾಡಗೀರಿ, ಗೌರವಾಧ್ಯಕ್ಷ ಬಸಪ್ಪ ಗುಣದಾಳ, ಉಪಾಧ್ಯಕ್ಷ ಅಮರಪ್ಪ ಚಲವಾದಿ, ರವಿ ಯಲ್ಲಡಗಿ, ಪಿ.ಕೆ. ಗುಂದಬಾನ, ಆರ್.ಎಚ್.ಬನಸೋಡೆ, ಡಿ.ಎಸ್. ಹರಿಜನ, ಎಸ್.ಎಂ. ಡೋಣಿ, ನಿಜಪ್ಪ ಮೇಲಿನಕೇರಿ ಮತ್ತು ಕನರ್ಾಟಕ ದಲಿತ ಸಂಘರ್ಷ ಸಮಿತಿ ಸಂಚಾಲಕರಾದ ರಮೇಶ ಆಸಂಗಿ ಮತ್ತು ಮುಂತಾದವರು ಉಪಸ್ಥಿತರಿದ್ದರು
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್
ದ್ವಿಚಕ್ರವಾಹನ ಕಳ್ಳರ ಬಂಧನ : 6.10 ಲಕ್ಷ ಮೌಲ್ಯದ 14 ವಾಹನಗಳ ವಶಕ್ಕೆ ಎಸ್ ಪಿ ರಾಮರಾಜನ್
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ 