ವಿಜಯಪುರ: ಜಿಲ್ಲಾ ಮಟ್ಟದ ಯುವ ಸಂಸತ್ತು ಸ್ಪರ್ಧೆ
ಲೋಕದರ್ಶನ ವರದಿ
ವಿಜಯಪುರ 18; ತನ್ನ ನಾಗರಿಕ ಕರ್ತವ್ಯವನ್ನು ನಿರ್ಲಕ್ಷಿಸಿದ ನಾಗರಿಕನಿಗೆ ಪ್ರಜಾಪ್ರಭುತ್ವವನ್ನು ಟೀಕಿಸುವ ಹಕ್ಕು ಇಲ್ಲ. ಪ್ರಜಾಪ್ರಭುತ್ವದ ಬುನಾದಿಯನ್ನು ಭದ್ರ ಪಡಿಸುವ ಶಿಸ್ತು, ಇತರರ ಅಭಿಪ್ರಾಯಗಳ ಬಗ್ಗೆ ಗೌರವ, ತಾಳ್ಮೆ ಮುಂತಾದ ಆರೋಗ್ಯಕರ ಗುಣ ವಿಶೇಷಗಳನ್ನು ಮೈಗೂಡಿಸಿಕೊಳ್ಳಬೇಕು ಹಾಗೂ ಸಂಸತ್ ಕಾರ್ಯಕಲಾಪದ ಬಗ್ಗೆ ಅರಿವು ಮೂಡಿಸಿಕೊಂಡು ಉತ್ತಮ ಸಂಸತ್ತು ರಚನೆಗೆ ಕಾರಣವಾಗಬೇಕು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಜೆ.ಎಸ್.ಪೂಜೇರಿ ಕರೆ ನೀಡಿದರು.
ಸಂಸದೀಯ ವ್ಯವಹಾರಗಳ ಇಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯು ಪ.ಪೂ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿರುವ ಜಿಲ್ಲಾ ಮಟ್ಟದ "ಯುವ ಸಂಸತ್ತು" ಸ್ಪರ್ದೇಯನ್ನು ಸಸಿಗೆ ನೀರೂಣಿಸುವದರ ಮೂಲಕ ಉದ್ಘಾಟಿಸಿ ಮಾತನಾಡಿ "ಇಂದಿನ ವಿದ್ಯಾರ್ಥಿ ನಾಳಿನ ನಾಯಕ" ಆದ್ದರಿಂದ ಈ ಸ್ಪರ್ದೇಯ ಉಪಯೋಗ ಪಡೆದುಕೊಂಡು ಉತ್ತಮ ಸಂಸದೀಯ ಗುಣ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
ಪ್ರೊ.ಗೀತಾ.ಕಟ್ಟಿ, ಪ್ರೊ.ಎಂ.ಎಸ್.ಮಾಲಿಪಾಟೀಲ, ಭಾಗ್ಯಲಕ್ಷ್ಮೀ ನಿರ್ಣಾಯಕರಾಗಿ ಕಾರ್ಯನಿರ್ವಹಿಸಿದರು. ಎಸ್.ಸಿ.ತೊಳನೂರ ಕಾರ್ಯಕ್ರಮ ನಿರೂಪಿಸಿದರು. ಟಿ.ಬಿ.ಕಾರದಾನಿ. ಎಸ.ಆರ್.ಭುಯ್ಯಾರ, ಎಚ್.ಆಯ್.ಮಾಳಾಬಾಗಿ, ಸುಧೀರಗೌಡ.ಬಿರಾದಾರ, ವಿ.ಜಿ.ಕಿವುಡಜಾಡರ, ಹಾಗೂ ಕಾಲೇಜಿನ ವಿದ್ಯಾಥರ್ಿಗಳು ಉಪಸ್ಥಿತರಿದ್ದರು.
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್
ದ್ವಿಚಕ್ರವಾಹನ ಕಳ್ಳರ ಬಂಧನ : 6.10 ಲಕ್ಷ ಮೌಲ್ಯದ 14 ವಾಹನಗಳ ವಶಕ್ಕೆ ಎಸ್ ಪಿ ರಾಮರಾಜನ್
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ 