ವಿಜಯಪುರ: ಬೆಂಕಿ ಪೊಟ್ಟಣ ತುಂಬಿದ್ದ ಲಾರಿಗೆ ಬೆಂಕಿ
ವಿಜಯಪುರ 22: ಬೆಂಕಿ ಪೊಟ್ಟಣ ತುಂಬಿದ್ದ ಲಾರಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಲಾರಿ ಸಂಪೂರ್ಣ ಸುಟ್ಟು ಕರಕಲಾದ ಘಟನೆ ವಿಜಯಪುರ ತಾಲೂಕಿನ ಅರಕೇರಿ ತಾಂಡಾ ಬಳಿ ರಾಷ್ಟ್ರೀಯ ಹೆದ್ದಾರಿ 50 ರ ಮೇಲೆ ಸಂಭವಿಸಿದೆ.
ತಮಿಳುನಾಡು ಮೂಲದ ಲಾರಿ ಬೆಂಕಿಗೆ ಆಹುತಿಯಾಗಿದ್ದು, ತಕ್ಷಣವೇ ಚಾಲಕ ಹಗೂ ಕ್ಲೀನರ್ ಇಬ್ಬರೂ ಗಾಬರಿಗೊಂಡು ತಕ್ಷಚಣವೇ ಲಾರಿಯಿಂದ ಕೆಳಗೆ ಜಿಗಿದು ಪ್ರಾಣಾಪಾಯದಿಮದ ಪಾರಾಗಿದ್ದಾರೆ,
ಈ ಬೆಂಕಿ ಆಕಸ್ಮಿಕದಿಂದ ಲಾರಿ ಸಂಪೂರ್ಣ ಸುಟ್ಟು ಕರಕಲಾಗಿದೆ. ತಮಿಳುನಾಡಿನಿಂದ ಮಹಾರಾಷ್ಟ್ರದ ಸೊಲ್ಲಾಪೂರಕ್ಕೆ ಬೆಂಕಿ ಪೊಟ್ಟಣಗಳನ್ನು ತುಂಬಿಕೊಂಡು ಹೊರಟಾಗ ಅರಕೇರಿ ತಾಂಡಾ ಬಳಿ ಆಕಸ್ಮಿಕವಾಗಿ ಬೆಂಕಿ ಹೊತ್ತುಕೊಂಡಿದ್ದೆ, ಲಾರಿಗೆ ಬೆಂಕಿ ತಗುಲಿ ಧಗಧಗನೆ ಹೊತ್ತಿ ಉರಿದಿದ್ದು, ಆಗಸದೆತ್ತರಕ್ಕೆ ಬೆಂಕಿಯ ಕೆನ್ನಾಲಿಗೆ ಚಿಮ್ಮುತ್ತಿತ್ತು, ಈ ಘಟನೆಯಿಂದಾಗಿ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು. ರಸ್ತೆಯ ಎರಡೂ ಬದಿಗೆ ವಾಹನಗಳು ಕಿಲೋಮೀಟರವರೆಗೆ ನಿಂತಿದ್ದವು. ಸುದ್ದಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಲು ಹರಸಾಹಸ ಪಡಬೇಕಾಯಿತು. ಈ ಕುರಿತು ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 