ವಿಜಯಪುರ: ಬೆಂಕಿ ಪೊಟ್ಟಣ ತುಂಬಿದ್ದ ಲಾರಿಗೆ ಬೆಂಕಿ
ವಿಜಯಪುರ 22: ಬೆಂಕಿ ಪೊಟ್ಟಣ ತುಂಬಿದ್ದ ಲಾರಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಲಾರಿ ಸಂಪೂರ್ಣ ಸುಟ್ಟು ಕರಕಲಾದ ಘಟನೆ ವಿಜಯಪುರ ತಾಲೂಕಿನ ಅರಕೇರಿ ತಾಂಡಾ ಬಳಿ ರಾಷ್ಟ್ರೀಯ ಹೆದ್ದಾರಿ 50 ರ ಮೇಲೆ ಸಂಭವಿಸಿದೆ.
ತಮಿಳುನಾಡು ಮೂಲದ ಲಾರಿ ಬೆಂಕಿಗೆ ಆಹುತಿಯಾಗಿದ್ದು, ತಕ್ಷಣವೇ ಚಾಲಕ ಹಗೂ ಕ್ಲೀನರ್ ಇಬ್ಬರೂ ಗಾಬರಿಗೊಂಡು ತಕ್ಷಚಣವೇ ಲಾರಿಯಿಂದ ಕೆಳಗೆ ಜಿಗಿದು ಪ್ರಾಣಾಪಾಯದಿಮದ ಪಾರಾಗಿದ್ದಾರೆ,
ಈ ಬೆಂಕಿ ಆಕಸ್ಮಿಕದಿಂದ ಲಾರಿ ಸಂಪೂರ್ಣ ಸುಟ್ಟು ಕರಕಲಾಗಿದೆ. ತಮಿಳುನಾಡಿನಿಂದ ಮಹಾರಾಷ್ಟ್ರದ ಸೊಲ್ಲಾಪೂರಕ್ಕೆ ಬೆಂಕಿ ಪೊಟ್ಟಣಗಳನ್ನು ತುಂಬಿಕೊಂಡು ಹೊರಟಾಗ ಅರಕೇರಿ ತಾಂಡಾ ಬಳಿ ಆಕಸ್ಮಿಕವಾಗಿ ಬೆಂಕಿ ಹೊತ್ತುಕೊಂಡಿದ್ದೆ, ಲಾರಿಗೆ ಬೆಂಕಿ ತಗುಲಿ ಧಗಧಗನೆ ಹೊತ್ತಿ ಉರಿದಿದ್ದು, ಆಗಸದೆತ್ತರಕ್ಕೆ ಬೆಂಕಿಯ ಕೆನ್ನಾಲಿಗೆ ಚಿಮ್ಮುತ್ತಿತ್ತು, ಈ ಘಟನೆಯಿಂದಾಗಿ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು. ರಸ್ತೆಯ ಎರಡೂ ಬದಿಗೆ ವಾಹನಗಳು ಕಿಲೋಮೀಟರವರೆಗೆ ನಿಂತಿದ್ದವು. ಸುದ್ದಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಲು ಹರಸಾಹಸ ಪಡಬೇಕಾಯಿತು. ಈ ಕುರಿತು ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್
ದ್ವಿಚಕ್ರವಾಹನ ಕಳ್ಳರ ಬಂಧನ : 6.10 ಲಕ್ಷ ಮೌಲ್ಯದ 14 ವಾಹನಗಳ ವಶಕ್ಕೆ ಎಸ್ ಪಿ ರಾಮರಾಜನ್
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ 