ವಿಜಯಪುರ: ಆಹಾರ, ಸ್ವಚ್ಛತೆ ಅರಿವು ಕಾರ್ಯಕ್ರಮ
ಲೋಕದರ್ಶನ ವರದಿ
ವಿಜಯಪುರ 25: ನಗರದ ಬಾಲಕಿಯರ ಬಾಲ ಮಂದಿರದಲ್ಲಿ ಇತ್ತೀಚೆಗೆ ರಾಷ್ಟ್ರೀಯ ಪೋಷಣ್ ಅಭಿಯಾನದ ಮಾಸಾಚರಣೆಯ ಅಂಗವಾಗಿ ಬಾಲ ಮಂದಿರದ ಮಕ್ಕಳಿಗಾಗಿ ಪೌಷ್ಠಿಕ ಆಹಾರ ಹಾಗೂ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು ಬಾಲಕಿಯರ ಬಾಲ ಮಂದಿರದ ಅಧಿಕ್ಷಕರಾದ ದೀಪಾಕ್ಷಿ ಜಾನಕಿ ಉದ್ಘಾಟಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ನಂತರ ಪ್ರೋಟೇಕ್ಷನ್ ಆಫೀಸರ್ ವಾಣಿ ನಿಂಬಾಳ ಮಕ್ಕಳ ಸ್ವಚ್ಛತೆಯ ಬಗ್ಗೆ ತಿಳಿಸಿದರು.
ಬಳಿಕ ಮೇಲ್ವಿಚಾರಕಿಯರಾದ ಸಹನಾಜ ಹೈದರಖಾನ್ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಸಿಗಬಹುದಾದ ವಿವಿಧ ಸೌಲಭ್ಯಗಳ ಬಗ್ಗೆ ವಿವರಿಸಿದರು. ಮಧುಮತಿ ಜಂಗಮಶೆಟ್ಟಿ ಬಾಲ್ಯವಿವಾಹದ ದುಷ್ಟರಿಣಾಮಗಳ ನಗ್ಗೆ ತಿಳಿ ಹೇಳಿದರು. ಕಾವೇರಿ ಕಾಂಬಳೆ ಪೌಷ್ಟಿಕ ಆಹಾರದ ಪ್ರತಿಜ್ಞಾ ವಿಧಿ ನೆರವೇರಿಸಿ ಕೊಟ್ಟರು.
ಕಾರ್ಯಕ್ರಮದಲ್ಲಿ ಅಶ್ವಿನಿ ಸನದಿ ನಿರೂಪಿಸಿದರು. ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಅತಿಕಾ ಸಿದ್ಧಿ, ದೇಸಾಯಿ, ಕಾಂಬಳೆ, ರಿಯಾಜ ಅಂಗನವಾಡಿ ಕಾರ್ಯಕತರ್ೆಯರು, ಬಾಲಕಿಯರ ಬಾಲ ಮಂದಿರದ ಮಕ್ಕಳು ಮುಂತಾದವರು ಹಾಜರಿದ್ದರು.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 