ವಿಜಯಪುರ: ಗೌರಿಶಂಕರ ರತ್ನ ಪ್ರಶಸ್ತಿ ಪ್ರದಾನ
ಲೋಕದರ್ಶನ ವರದಿ
ವಿಜಯಪುರ 13: ಬಸವನ ಬಾಗೇವಾಡಿ ತಾಲೂಕಿನ ಯಂಭತ್ತಾಳ ಗ್ರಾಮದಲ್ಲಿ ಶ್ರೀ ಗೌರಿಶಂಕರ ದೇವರ 75ನೇ ಜಾತ್ರಾ ಮಹೋತ್ಸವದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನಗೈದ ಸಾಧಕರಿಗೆ ಪ್ರತಿ ವರ್ಷದಂತೆ ಈ ವರ್ಷವೂ ರಾಜ್ಯಮಟ್ಟದ 'ಶ್ರೀ ಗೌರಿಶಂಕರ ರತ್ನ ಪ್ರಶಸ್ತಿ' ನೀಡಿ ಗೌರವಿಸಲಾಯಿತು.
ವಿಜಯಪುರದ ಹಾಸಿಂಪೀರ ವಾಲಿಕಾರ (ಸಮಾಜ ಕ್ಷೇತ್ರ), ಶಕುಂತಲಾ ಹಿರೇಮಠ (ಸಂಗೀತ ಕ್ಷೇತ್ರ), ತಾಳಿಕೋಟಿಯ ಡಾ. ಸುಜಾತಾ ಚಲವಾದಿ (ಸಾಹಿತ್ಯ ಕ್ಷೇತ್ರ), ಇಂಗಳೇಶ್ವರದ ಕೆ.ಎಸ್. ಬಾಗೇವಾಡಿ (ಜಾನಪದ ಕ್ಷೇತ್ರ) ಈ ನಾಲ್ವರು ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಮಾಇ ಸಚಿವ, ಬ.ಬಾಗೇವಾಡಿ ಮತಕ್ಷೇತ್ರದ ಶಾಸಕ ಶಿವಾನಂದ ಪಾಟೀಲ, ಚಿಮ್ಮಲಗಿಯ ಶ್ರೀ ನೀಲಕಂಠೇಶ್ವರ ಶಿವಾಚಾರ್ಯರು, ಶಿವಾನಂದ ಮಂಗಾನವರ ಮುಂತಾದವರು ಸಮಾರಂಬದಲ್ಲಿ ಉಪಸ್ಥಿತರಿದ್ದರು.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 