ವಿಜಯಪುರ: ಮಾಧ್ಯಮ ಅಕಾಡೆಮಿ ಪ್ರಶಸ್ತಿಗೆ ಪತ್ರಕರ್ತ ಅನಿಲ ಆಯ್ಕೆ
ವಿಜಯಪುರ 03: ಜಿಲ್ಲೆಯ ಅಪರೂಪದ ಸಂವೇದನಾಶೀಲ ಸಾಹಿತಿ, ದಲಿತ ಸಾಕ್ಷಿ ಪ್ರಜ್ಞೆಯಂತಿರುವ ಹಿರಿಯ ಪತ್ರಕರ್ತ ಅನಿಲ ಹೊಸಮನಿ ಅವರು ಮಾಧ್ಯಮ ಅಕಾಡೆಮಿ ಪ್ರಶಸ್ತಿಗೆ ಆಯ್ಕೆಯಾಗಿರುವದಕ್ಕೆ ಜಿಲ್ಲೆಯ ಚೆ ಗುವೆರಾ ಯೂಥ್ ಫೆಡರೇಶನ್ ಸಂಘಟನೆಯ ಅಧ್ಯಕ್ಷ ಹಾಗೂ ಯುವ ಸಾಹಿತಿ, ಪತ್ರಕರ್ತ ಮಂಜುನಾಥ.ಎಸ್.ಕಟ್ಟಿಮನಿ ಅಭಿನಂದಿಸಿದ್ದಾರೆ.
ವಿಜಯಪುರ ಜಿಲ್ಲೆಯ ಅನಿಲ ಹೊಸಮನಿಯವರು ಪತ್ರಿಕೋದ್ಯಮದ ಧರ್ಮವನ್ನು ಒಂದು ವ್ರತದಂತೆ ಪಾಲಿಸಿಕೊಂಡು ಬಂದವರು, ಪತ್ರಿಕೋದ್ಯಮದ ಎಲ್ಲ ನೋವು ನಲಿವುಗಳನ್ನು ಕಂಡುಂಡವರು, ಯಾವುದೇ ವಶೀಲಿಬಾಜಿ ಮಾಡದವರು.
ಇಂತಹ ನಿಜವಾದ ಸಾಧಕರನ್ನು ಗುರುತಿಸಿ ಸರ್ಕಾರ ಈ ಬಾರಿ ಆಯ್ಕೆ ಮಾಡಿರುವುದರಿಂದ ಅಕಾಡೆಮಿಯ ಗೌರವ ಇಮ್ಮಡಿಯಾಗಿದೆ. ಅದಕ್ಕಾಗಿ ಜಿಲ್ಲೆಯ ಎಲ್ಲ ಹಿರಿಯ, ಕಿರಿಯ ಪತ್ರಕರ್ತರು ಹಾಗೂ ಸಾಹಿತಿಗಳ ಪರವಾಗಿ ಹಾರ್ದಿಕ ಅಭಿನಂದನೆಗಳು ಎಂದು ತಿಳಿಸಿದ್ದಾರೆ.
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್
ದ್ವಿಚಕ್ರವಾಹನ ಕಳ್ಳರ ಬಂಧನ : 6.10 ಲಕ್ಷ ಮೌಲ್ಯದ 14 ವಾಹನಗಳ ವಶಕ್ಕೆ ಎಸ್ ಪಿ ರಾಮರಾಜನ್
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ 