ವಿಜಯಪುರ: ಮಾಧ್ಯಮ ಅಕಾಡೆಮಿ ಪ್ರಶಸ್ತಿಗೆ ಪತ್ರಕರ್ತ ಅನಿಲ ಆಯ್ಕೆ
ವಿಜಯಪುರ 03: ಜಿಲ್ಲೆಯ ಅಪರೂಪದ ಸಂವೇದನಾಶೀಲ ಸಾಹಿತಿ, ದಲಿತ ಸಾಕ್ಷಿ ಪ್ರಜ್ಞೆಯಂತಿರುವ ಹಿರಿಯ ಪತ್ರಕರ್ತ ಅನಿಲ ಹೊಸಮನಿ ಅವರು ಮಾಧ್ಯಮ ಅಕಾಡೆಮಿ ಪ್ರಶಸ್ತಿಗೆ ಆಯ್ಕೆಯಾಗಿರುವದಕ್ಕೆ ಜಿಲ್ಲೆಯ ಚೆ ಗುವೆರಾ ಯೂಥ್ ಫೆಡರೇಶನ್ ಸಂಘಟನೆಯ ಅಧ್ಯಕ್ಷ ಹಾಗೂ ಯುವ ಸಾಹಿತಿ, ಪತ್ರಕರ್ತ ಮಂಜುನಾಥ.ಎಸ್.ಕಟ್ಟಿಮನಿ ಅಭಿನಂದಿಸಿದ್ದಾರೆ.
ವಿಜಯಪುರ ಜಿಲ್ಲೆಯ ಅನಿಲ ಹೊಸಮನಿಯವರು ಪತ್ರಿಕೋದ್ಯಮದ ಧರ್ಮವನ್ನು ಒಂದು ವ್ರತದಂತೆ ಪಾಲಿಸಿಕೊಂಡು ಬಂದವರು, ಪತ್ರಿಕೋದ್ಯಮದ ಎಲ್ಲ ನೋವು ನಲಿವುಗಳನ್ನು ಕಂಡುಂಡವರು, ಯಾವುದೇ ವಶೀಲಿಬಾಜಿ ಮಾಡದವರು.
ಇಂತಹ ನಿಜವಾದ ಸಾಧಕರನ್ನು ಗುರುತಿಸಿ ಸರ್ಕಾರ ಈ ಬಾರಿ ಆಯ್ಕೆ ಮಾಡಿರುವುದರಿಂದ ಅಕಾಡೆಮಿಯ ಗೌರವ ಇಮ್ಮಡಿಯಾಗಿದೆ. ಅದಕ್ಕಾಗಿ ಜಿಲ್ಲೆಯ ಎಲ್ಲ ಹಿರಿಯ, ಕಿರಿಯ ಪತ್ರಕರ್ತರು ಹಾಗೂ ಸಾಹಿತಿಗಳ ಪರವಾಗಿ ಹಾರ್ದಿಕ ಅಭಿನಂದನೆಗಳು ಎಂದು ತಿಳಿಸಿದ್ದಾರೆ.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 