ವಿಜಯಪುರ: ಹಾಲು ಒಕ್ಕೂಟಕ್ಕೆ ಪ್ರಶಸ್ತಿ ಗರಿ
ಲೋಕದರ್ಶನ ವರದಿ
ವಿಜಯಪುರ 21: ಅವಳಿ ಜಿಲ್ಲೆಯ ಸಹಕಾರಿ ಹಾಲು ಒಕ್ಕೂಟದ ಅಧ್ಯಕ್ಷ ಹಾಗೂ ಆಡಳಿತ ಮಂಡಳಿ ಸಮರ್ಥ ಮಾರ್ಗದರ್ಶನ ಅಧಿಕಾರಿ ಹಾಗೂ ಸಿಬ್ಬಂದಿ ಉತ್ತಮ ಕಾರ್ಯನಿರ್ವಹಿಸುತ್ತಿದ್ದು, ಉತ್ತರ ಕರ್ನಾಟಕದಲ್ಲೇ ಮಾದರಿ ಒಕ್ಕೂಟವಾಗಿ ರೂಪುಗೊಂಡಿದೆ ಎಂದು ವಿಜಯಪುರ ಸಹಕಾರಿ ಜಿಲ್ಲಾ ಮಧ್ಯವರ್ತಿ ಬ್ಯಾಂಕ್ ಅಧ್ಯಕ್ಷ ಹಾಗೂ ಶಾಸಕ ಶಿವಾನಂದ ಪಾಟೀಲ ಹೇಳಿದರು.
ಇತ್ತೀಚೆಗೆ ನಡೆದ ಬ್ಯಾಂಕಿನ ಸರ್ವ ಸಾಮಾನ್ಯ ಸಭೆಯಲ್ಲಿ ಉತ್ತಮ ಕಾರ್ಯ ನಿರ್ವಹಣೆಗಾಗಿ ಒಕ್ಕೂಟದ ಅಧ್ಯಕ್ಷ ಸಂಭಾಜಿ ಮಿಸಾಳೆ ಹಾಗೂ ಪ್ರಭಾರ ವ್ಯವಸ್ಥಾಪಕ ನಿರ್ದೇಶಕ ಡಾ. ಎಸ್.ಡಿ. ದೀಕ್ಷಿತ ಅವರನ್ನು ಸನ್ಮಾನಿಸಿ ಅವರು ಮಾತನಾಡಿದರು.
ಪ್ರಭಾರ ವ್ಯವಸ್ಥಾಪಕ ನಿರ್ದೇಶಕ ಡಾ.ಎಸ್.ಡಿ. ದೀಕ್ಷಿತ ಮಾತನಾಡಿ, ಗ್ರಾಹಕರಿಗೆ ಯೋಗ್ಯ ದರದಲ್ಲಿ ಗುಣಮಟ್ಟದ ಹಾಲು ಹಾಗೂ ಹಾಲಿನ ಉತ್ಪನ್ನಗಳನ್ನು ಸಂಸ್ಥೆಯು ಪೂರೈಸುತ್ತಿದ್ದು, ಒಕ್ಕೂಟವನ್ನು ಪ್ರಶಸ್ತಿಗಾಗಿ ಪರಿಗಣಿಸಿದ್ದಕ್ಕಾಗಿ ಕರ್ನಾಟಕ ಹಾಲು ಮಹಾಮಂಡಳಿ ಮತ್ತು ಒಕ್ಕೂಟದ ನಿರ್ದೇಶಕ ಶ್ರೀಶೈಲಗೌಡ ಪಾಟೀಲರಿಗೆ, ಬ್ಯಾಂಕ್ ಅಧ್ಯಕ್ಷರಿಗೆ ಹಾಗೂ ಆಡಳಿತ ಮಂಡಳಿಗೆ ಆಭಾರಿಯಾಗಿರುವುದಾಗಿ ಅಹೇಳಿದರು.
ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಒಕ್ಕೂಟದ ಮಾಜಿ ಅಧ್ಯಕ್ಷ ಸಂಗಣ್ಣ ಹಂಡಿ, ನಿದರ್ೆಶಕರಾದ ಗುರಪ್ಪ ಚಲವಾದಿ, ಸಿದ್ದಣ್ಣ ಕಡಪಟ್ಟಿ, ಈರನಗೌಡ ಕರಿಗೌಡ್ರ, ಮಹಾದೇವ ಹನಗಂಡಿ, ಸಂಜಯ ತಳೇವಾಡ, ಗಾಯತ್ರಿ ಆದಬಸಪ್ಪಗೋಳ, ಅಶ್ವಿನಿ ಹಳ್ಳೂರ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 