ವಿಜಯಪುರ: ವೃದ್ಧೆ ಕೊಲೆ: ಆರೋಪಿ ಬಂಧನ
ಲೋಕದರ್ಶನ ವರದಿ
ವಿಜಯಪುರ 05: ವಿಜಯಪುರ ಶಾಸ್ತ್ರೀನಗರದ ಜನ್ನತ್ ಮ್ಯಾರೇಜ್ ಹಾಲ್ ಹತ್ತಿರವಿರುವ ತನ್ನ ಮನೆಯಲ್ಲಿ ಒಬ್ಬಂಟಿಯಾಗಿ ವಾಸವಾಗಿದ್ದ ವೃದ್ಧ ಮಹಿಳೆ ರೇಖಾ ಶಿವಾನಂದ ದೇಶಮಾನೆ (ನಿವೃತ್ತ ನರ್ಸ) ಅವರನ್ನು ಕೊಲೆ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಯನ್ನು ಅಥಣಿಯ ಕೇದಾರಿ ಉರ್ಫ್ ಜ್ಯೊತಿಬಾ ಪರಶುರಾಮ ಪೋಳ (37) ಎಂಬಾತನೇ ಬಂಧಿತ ಆರೋಪಿ. ಕಳೆದ ಅಕ್ಟೋಬರ್ 13 ರಂದು ರಾತ್ರಿ ಜನ್ನತ್ ಮ್ಯಾರೇಜ್ ಹಾಲ್ ಬಳಿ ಇರುವ ತನ್ನ ಮನೆಯಲ್ಲಿ ವಾಸವಿದ್ದ ರೇಖಾ ದೇಶಮಾನೆ ಅವರನ್ನು ಯಾರೋ ಆರೋಪಿತರು ಅವರ ಸೀರೆಯಿಂದ ಕುತ್ತಿಗೆಗೆ ಬಿಗಿದು ಬರ್ಬರವಾಗಿ ಹತ್ಯೆ ಮಾಡಿದ ಬಗ್ಗೆ ನಗರದ ಗಾಂಧಿಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಪ್ರಕರಣದ ತನಿಖೆ ಕೈಕೊಂಡ ಪೊಲೀಸರು ಕೊಲೆ ಆರೋಪಿ ಕೇದಾರಿ ಯನ್ನು ಬಂಧಿಸಿದ್ದಾರೆ. ಮೃತ ರೇಖಾ ದೇಶಮಾನೆ ಅವರ ಮನೆಯಲ್ಲಿ ಬಾಡಿಗೆದಾರನಾಗಿದ್ದ ಆರೋಪಿತನು ಕೊಲೆ ನಡೆದ ದಿನದಿಂದ ನಾಪತ್ತೆಯಾಗಿದ್ದ. ದಿ. 4 ರಂದು ಮಹಾಲಿಂಗಪುರ ಬಸ್ ನಿಲ್ದಾಣದಲ್ಲಿ ಪೊಲೀಸರು ಬಂದಿಸಿದ್ದು, ನಂತರ ವಿಚಾರಣೆಗೊಳಪಡಿಸಿದಾಗ ಆರೋಪಿತನು ರೇಖಾ ದೇಶಮಾನೆ ಅವರನ್ನು ಕತ್ತು ಹಿಸುಕಿ ಕೊಲೆ ಮಾಡಿದ ಬಗ್ಗೆ ಒಪ್ಪಿಕೊಂಡಿರುತ್ತಾನೆ ಎಂದು ಎಸ್ಪಿ ನಿಕ್ಕಂ ಹೇಳಿದರು.
ಕೊಲೆ ಪ್ರಕರಣ ಪತ್ತೆ ಹಚ್ಚಲು ಎಎಸ್ಪಿ ಬಿ.ಎಸ್. ನೇಮಿಗೌಡ ಅವರ ನೇತೃತ್ವದಲ್ಲಿ ಡಿವೈಎಸ್ಪಿ ಲಕ್ಷ್ಮೀನಾರಾಯಣ, ಸಿಪಿಐ ರವೀಂದ್ರ ನಾಯ್ಕೋಡಿ, ಪಿಎಸ್ಐ ಶರಣಗೌಡ ಗೌಡರ, ಪಿಎಸ್ಐ ಸತೀಶ ಕಣಮೇಶ್ವರ, ಸಿಬ್ಬಂದಿಗಳಾದ ಎಸ್.ಬಿ. ಚನಶೆಟಿಟ, ಬಾಬು ಗುಡಿಮನಿ, ಎಚ್.ಎಚ್. ಜಮಾದಾರ, ಜಿ.ವೈ. ದಾಸರ, ಎನ್.ಕೆ. ಮುಲ್ಲಾ, ಎಂ.ಬಿ. ಢವಳಗಿ, ಸಿದ್ದು ಬಿರಾದಾರ, ತಾಂತ್ರಿಕ ನೆರವು ನೀಡಿದ ಸುನೀಲ ಗೌಳಿ, ಗುಂಡು ಗಿರಣಿವಡ್ಡರ ಮೊದಲಾದವರನ್ನೊಳಗೊಂಡ ತಂಡ ರಚಿಸಲಾಗಿತ್ತು. ಎಸಿ ಆರೋಪಿಯನ್ನು ಬಂಧಿಸಿದೆ. ಈ ತಂಡದ ಕಾರ್ಯವನ್ನು ಶ್ಲ್ಯಾಘಿಸಿ ಬಹುಮಾನ ಘೋಷಿಸಲಾಗಿದೆ
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 